ಕೋಲ್ಕತ್ತ:ಪ್ರವಾಸಿ ಇಂಗ್ಲೆಂಡ್ ವಿರುದ್ಧ ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಮೊದಲ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಭಾರತ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಇದರೊಂದಿಗೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದ ಮುನ್ನಡೆ ದಾಖಲಿಸಿದೆ. ಭಾರತ 12.5 ಓವರ್ಗಳಲ್ಲೇ ಗುರಿ ತಲುಪಿತು.
133 ರನ್ಗಳ ಸಾಧಾರಣ ಗುರಿ ಬೆನ್ನಟ್ಟಿದ ಭಾರತಕ್ಕೆ ಅಭಿಷೇಕ್ ಶರ್ಮಾ 20 ಎಸೆತಗಳಲ್ಲಿ ಅರ್ಧಶತಕ ಸಾಧನೆ ಮಾಡಿದರು. ಅಂತಿಮವಾಗಿ
34 ಎಸೆತಗಳಲ್ಲಿ 79 ರನ್ ಗಳಿಸಿ ಅಬ್ಬರಿಸಿದರು. ಅಭಿಷೇಕ್ ಇನಿಂಗ್ಸ್ನಲ್ಲಿ ಎಂಟು ಸಿಕ್ಸರ್ ಹಾಗೂ ಐದು ಬೌಂಡರಿಗಳು ಸೇರಿದ್ದವು. ನಾಯಕ ಸೂರ್ಯಕುಮಾರ್ ಯಾದವ್ ಶೂನ್ಯಕ್ಕೆ ಔಟ್ ಆದರೆ ಸಂಜು ಸ್ಯಾಮ್ಸನ್ 26 ರನ್ಗಳ ಉಪಯುಕ್ತ ಕೊಡುಗೆ ನೀಡಿದರು.ಈ ಮೊದಲು ವರುಣ್ ಚಕ್ರವರ್ತಿ (23ಕ್ಕೆ 3), ಅರ್ಷದೀಪ್ ಸಿಂಗ್ (17ಕ್ಕೆ 2) ಸೇರಿದಂತೆ ಭಾರತೀಯ ಬೌಲರ್ಗಳ ಸಾಂಘಿಕ ದಾಳಿಗೆ ಸಿಲುಕಿರುವ ಇಂಗ್ಲೆಂಡ್, ಇಲ್ಲಿ ನಡೆಯುತ್ತಿರುವ ಮೊದಲ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ 132 ರನ್ಗಳಿಗೆ ಆಲೌಟ್ ಆಯಿತು. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು.
ಇನಿಂಗ್ಸ್ನ ಮೊದಲ ಓವರ್ನಲ್ಲೇ ಫಿಲಿಪ್ ಸಾಲ್ಟ್ (0)ವಿಕೆಟ್ ಕಬಳಿಸಿದ ಅರ್ಷದೀಪ್ ಸಿಂಗ್ ಆಘಾತ ನೀಡಿದರು. ಇದಾದ ಬೆನ್ನಲ್ಲೇ ಬೆನ್ ಡಕೆಟ್ (4) ಅವರಿಗೂ ಪೆವಿಲಿಯನ್ ದಾರಿ ತೋರಿಸಿದರು.ಬಳಿಕ ದಾಳಿಗಿಳಿದ ವರುಣ್ ಚಕ್ರವರ್ತಿ ಮೋಡಿ ಮಾಡಿದರು. ಹ್ಯಾರಿ ಬ್ರೂಕ್ (17) ಹಾಗೂ ಲಿಯಾಮ್ ಲಿವಿಂಗ್ಸ್ಟೋನ್ (0) ಅವರನ್ನು ಹೊರದಬ್ಬಿದರು. ಅವರಿಗೆ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಅವರಿಂದಲೂ ಉತ್ತಮ ಬೆಂಬಲ ದೊರಕಿತು.ಏತನ್ಮಧ್ಯೆ ಏಕಾಂಗಿ ಹೋರಾಟ ನೀಡಿದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್, ಸಮಯೋಚಿತ ಅರ್ಧಶತಕದ ಸಾಧನೆ ಮಾಡಿದರು. ಬಟ್ಲರ್ 44 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 68 ರನ್ ಗಳಿಸಿದರು. ಇನ್ನುಳಿದಂತೆ ಜೇಕಬ್ ಬೆತೆಲ್ (7), ಜೆಮಿ ಒವರ್ಟನ್ (2), ಗಸ್ ಅಟ್ಕಿನ್ಸನ್ (2), ಜೋಫ್ರಾ ಆರ್ಚರ್ (12), ಅದಿರ್ ರಶೀದ್ (8*) ಹಾಗೂ ಮಾರ್ಕ್ ವುಡ್ (1) ನಿರಾಸೆ ಮೂಡಿಸಿದರು.ಭಾರತದ ಪರ ವರುಣ್ ಚಕ್ರವರ್ತಿ ಮೂರು ಮತ್ತು ಅರ್ಷದೀಪ್ ಸಿಂಗ್, ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಎರಡು ವಿಕೆಟ್ ಗಳಿಸಿದರು.