ನವದೆಹಲಿ: ಕೇರಳ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಇಂದು ವೇಳಾಪಟ್ಟಿ ಪ್ರಕಟ ಮಾಡುವ ಸಾಧ್ಯತೆ ಇದೆ.ಭಾನುವಾರ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಿಗದಿಯಾಗಿದ್ದು, ಈ ಸಂದರ್ಭದಲ್ಲಿ ನಾಲ್ಕು ರಾಜ್ಯಗಳು ಹಾಗೂ
ಒಂದು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದೆ. ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಗೆ ಚುನಾವಣೆ ಘೋಷಣೆಯಾಗಲಿದೆ.ಪಶ್ಚಿಮ ಬಂಗಾಳದಲ್ಲಿ ಮೇ 7ರಂದು, ತಮಿಳುನಾಡಿನಲ್ಲಿ ಮೇ 10ರಂದು, ಅಸ್ಸಾಂನಲ್ಲಿ ಮೇ 20ರಂದು, ಕೇರಳದಲ್ಲಿ ಮೇ 23ರಂದು ಮತ್ತು ಪುದುಚೆರಿಯಲ್ಲಿ ಜೂನ್ 15ರಂದು ವಿಧಾನಸಭೆಗಳ ಅವಧಿ ಕೊನೆಗೊಳ್ಳಲಿದೆ.
ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ರಾಜ್ಯಗಳಿಗೆ ಭೇಟಿ ನೀಡಿ ಚುನಾವಣಾ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದೆ. ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್ಐಆರ್) ನಂತರ ಈ ರಾಜ್ಯಗಳಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.
2021ರಲ್ಲಿ ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಹಾಗೂ ಅಸ್ಸಾಂನಲ್ಲಿ ಮೂರು ಹಂತದಲ್ಲಿ ಚುನಾವಣೆ ನಡೆದಿದ್ದರೆ, ಉಳಿದ ಮೂರು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು.












