ಸುಳ್ಯ: ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರ ಅಧ್ಯಕ್ಷತೆಯಲ್ಲಿ ಆಸ್ಪತ್ರೆಯ ಕಚೇರಿಯಲ್ಲಿ ನಡೆಯಿತು.ಆಸ್ಪತ್ರೆಯಲ್ಲಿ
ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು ಶೀಘ್ರದಲ್ಲೇ ಕಾಮಗಾರಿಗಳ ಪೂರ್ಣಗೊಳಿಸಲು ಸಂಬಂಧಪಟ್ಟವರಿಗೆ ಸೂಚಿಸಿದರು.
ಸಭೆಯಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಡಾ.ಮನೋಜ್ ಅಡ್ಡಂತ್ತಡ್ಕ, ಸುನಿಲ್ ಕೇರ್ಪಳ, ಗಿರೀಶ್ ಕಲ್ಲುಗದ್ದೆ, ಸುಬ್ರಹ್ಮಣ್ಯ ಕೊಡಿಯಾಲಬೈಲು, ಕೇಶವ ಮಾಸ್ಟರ್, ಸುನಿತಾ ಮೊಂತೆರೋ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ ಕೆ.ವಿ. ಉಪಸ್ಥಿತರಿದ್ದರು.