ಸುಳ್ಯ:ಸುಳ್ಯದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ‘ಅಬಾಕಸ್ ‘ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮ ಜು.15 ರಂದು ಶಾಲಾ ಅಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಶುಭ ಹಾರೈಸಿದರು. ದೀಪ ಬೆಳಗಿ ಕಾರ್ಯಕ್ರಮಕ್ಕೆ
ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ‘ ಅಬಾಕಸ್ ತರಗತಿಯನ್ನು ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳು ಗಣಿತದಲ್ಲಿ ಬರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ ಜೊತೆಗೆ ಅವರ ಬೌದ್ಧಿಕ ಸಾಮರ್ಥ್ಯ ವೃದ್ದಿಗೊಳ್ಳುತ್ತದೆ’ ಎಂದು ತಿಳಿಸಿದರು. ಐ. ಆರ್. ಸಿ. ಎಂ. ಡಿ ಎಜ್ಯುಕೇಶನ್ ಸೆಂಟರ್ ಪುತ್ತೂರು ಮತ್ತು ಸುಳ್ಯ ಇದರ ಸಿಇಒ ಪ್ರಪುಲ್ಲ ಗಣೇಶ್ ಅಬಾಕಸ್ ತರಗತಿಯ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ನಿರೂಪಿಸಿದರು. ಐ. ಆರ್.ಸಿ.ಎಂ.ಡಿ ಎಜ್ಯುಕೇಶನ್ ಸೆಂಟರ್ನ ಗಣೇಶ್ ಕೆ, ನಿಕ್ಷಿತ, ಹರ್ಷಿತ, ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.