ಸುಳ್ಯ:ಜಾಲ್ಲೂರು ಗ್ರಾಮದ ಆಡ್ಕಾರಿನ ಮಾಯಿಲಕೋಟೆ ಅಂಜನಾದ್ರಿಯ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಕಾಲಾವದಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದ ಮೂರ್ತಿ ಪುರೋಹಿತ ನಾಗರಾಜ ಭಟ್ ಅವರ ಮಾರ್ಗದರ್ಶನದಲ್ಲಿ ಇಂದಿನಿಂದ 28ರ ತನಕ ನಡೆಯಲಿದೆ. ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಗುಳಿಗ ದೈವಕ್ಕೆ ಕೋಲ ಸಮರ್ಪಣೆ ಮತ್ತು ಹನುಮ ನೇಮೋತ್ಸವವು ವಿವಿಧ
ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಫೆ.26ರಂದು ಸ್ಥಳಶುದ್ಧಿ , ಶುದ್ಧಿಕಲಶ, ಗಣಪತಿ ಹವನ, ಶ್ರೀನಾಗ ಸನ್ನಿಧಿಯಲ್ಲಿ ನಾಗತಂಬಿಲ ನಡೆಯಲಿದ್ದು, ಬಳಿಕ ಹಸಿರುವಾಣಿ ಸಮರ್ಪಣೆಯೊಂದಿಗೆ ಉಗ್ರಾಣ ಮುಹೂರ್ತ ನಡೆಯಲಿದೆ. ಮಧ್ಯಾಹ್ನ ದೇವರಿಗೆ ಮಹಾಪೂಜೆ, ಅನ್ನದಾನ
ಸಂಜೆ ಕಲಾಕೇಸರಿ ನೃತ್ಯ ತಂಡದಿಂದ ನೃತ್ಯ ಸಂಭ್ರಮ ನಡೆಯಲಿದೆ. ಸಂಜೆ ಕಲಾ ಕೇಸರಿ ನೃತ್ಯ ತಂಡದಿಂದ ನೃತ್ಯ ಸಂಭ್ರಮ ನಡೆಯಲಿದೆ.
ರಾತ್ರಿ ಶ್ರೀ ಆಂಜನೇಯ ಸ್ವಾಮಿಗೆ ರಂಗಪೂಜೆ, ಅನ್ನಸಂತರ್ಪಣೆ ಜರುಗಲಿದೆ.

ಫೆ.27ರಂದು ಬೆಳಿಗ್ಗೆ ಶ್ರೀ ದೇವರಿಗೆ ಸೀಯಾಳ ಅಭಿಷೇಕ, ಪಂಚಾಮೃತ ಅಭಿಷೇಕ, ಪವಮಾನ ಅಭಿಷೇಕ ನಡೆಯಲಿದೆ. ದೀಪ ಪ್ರತಿಷ್ಠೆಯೊಂದಿಗೆ ಆಹ್ವಾನಿತ ತಂಡಗಳೊಂದಿಗೆ ಭಜನಾ ಕಾರ್ಯಕ್ರಮ ನೆರವೇರಲಿದೆ. ಪೂರ್ವಾಹ್ನ ಶ್ರೀ ಗುಳಿಗರಾಜ ಸನ್ನಿಧಿಯಲ್ಲಿ ದೇವಕ್ರಿಯಾ ತಂಬಿಲ ಸೇವೆ, ಶ್ರೀ ದೇವರಿಗೆ ಮಹಾಪೂಜೆ, ಬ್ರಹ್ಮಸಂತರ್ಪಣೆ, ಅನ್ನದಾನ ನಡೆಯಲಿದೆ. ಅಪರಾಹ್ನ ಇಳಂತಾಜೆ ತರವಾಡಿನಲ್ಲಿ ವೀಳ್ಯ ನೀಡಿ ಹನುಮ ದೈವದ ಭಂಡಾರ ತರಲಾಗುವುದು. ಸಂಜೆ ಭಜನಾ ಕಾರ್ಯಕ್ರಮದ ಮಗಳಂ ನಡೆಯಲಿದೆ.ರಾತ್ರಿ ಗುಳಿಗರಾಜ ದೈವದ ಭಂಡಾರ ತೆಗೆದು ಶ್ರೀ ಆಂಜನೇಯ ಸ್ವಾಮಿಯ ಅಂಗಣಪ್ರವೇಶ, ಶ್ರೀ ಹನುಮ ನೇಮೋತ್ಸವ ನಡೆಯಲಿದೆ. ಬಳಿಕ ಗುಳಿಗರಾಜ ದೈವದ ಕೋಲ, ಶ್ರೀ ದೇವರಿಗೆ ಅಲಂಕಾರ ಪೂಜೆ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ಕಟ್ಟೆಪೂಜೆ, ದರ್ಶನಬಲಿ, ದೈವ – ದೇವರ ಭೇಟಿ, ಬಟ್ಟಲುಕಾಣಿಕೆ, ಶ್ರೀಮುಡಿ ಗಂಧಪ್ರಸಾದ ವಿತರಣೆ ಜರುಗಲಿದೆ.
ಫೆ.28ರಂದು ಬೆಳಿಗ್ಗೆ ಶ್ರೀ ದೇವರಿಗೆ ನವಕ ಕಲಶಾಭಿಷೇಕ, ಎಳನೀರು ಅಭಿಷೇಕ, ಭಜನಾ ಕಾರ್ಯಕ್ರಮ, – ಮಂತ್ರಾಕ್ಷತೆ, ಅನ್ನಸಂತರ್ಪಣೆಯೊಂದಿಗೆ – ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.