ಸುಳ್ಯ: ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರು ಅಂಜನಾದ್ರಿ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಕ್ಷೇತ್ರದಲ್ಲಿ ಕಾಲಾವಧಿ ಜಾತ್ರೋತ್ಸವ ಸಂಪನ್ನಗೊಂಡಿತು. ಜಾತ್ರೋತ್ಅವದ ಅಂಗವಾಗಿ ಹನುಮ ನೇಮೋತ್ಸವ ಗುಳಿಗ ದೈವದ ಕೋಲ ನಡೆಯಿತು.
ಶ್ರೀ ಗುಳಿಗರಾಜ ಸನ್ನಿಧಿಯಲ್ಲಿ ದೇವಕ್ರಿಯಾ ತಂಬಿಲ ಸೇವೆ, ಶ್ರೀ ದೇವರಿಗೆ ಮಹಾಪೂಜೆ, ಬ್ರಹ್ಮಸಂತರ್ಪಣೆ, ನಡೆದು
ಅಪರಾಹ್ನ ಇಳಂತಾಜೆ ತರವಾಡಿನಲ್ಲಿ ವೀಳ್ಯ ನೀಡಿ ಹನುಮ ದೈವದ ಭಂಡಾರ ತರಲಾಯಿತು.ರಾತ್ರಿ ಗುಳಿಗರಾಜ ದೈವದ ಭಂಡಾರ ತೆಗೆದು ಶ್ರೀ ಆಂಜನೇಯ ಸ್ವಾಮಿಯ ಅಂಗಣಪ್ರವೇಶವಾಗಿ ಶ್ರೀ ಹನುಮ ನೇಮೋತ್ಸವ ನಡೆಯಿತು. ಬಳಿಕ ಗುಳಿಗರಾಜ ದೈವದ ಕೋಲ ಸಂಪನ್ನಗೊಂಡಿತು.
ಅಂಜನಾದ್ರಿಯ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಕಾಲಾವದಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದ ಮೂರ್ತಿ ಪುರೋಹಿತ ನಾಗರಾಜ ಭಟ್ ಅವರ ಮಾರ್ಗದರ್ಶನದಲ್ಲಿ ಸಂಪನ್ನಗೊಂಡಿತು. ಫೆ.27ರಂದು ರಾತ್ರಿ ಶ್ರೀ ದೇವರಿಗೆ ಅಲಂಕಾರ ಪೂಜೆ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ಕಟ್ಟೆಪೂಜೆ, ದರ್ಶನಬಲಿ, ದೈವ – ದೇವರ ಭೇಟಿ, ಬಟ್ಟಲುಕಾಣಿಕೆ, ಶ್ರೀಮುಡಿ ಗಂಧಪ್ರಸಾದ ವಿತರಣೆ ನಡೆಯಿತು.
ಫೆ.28ರಂದು ಬೆಳಿಗ್ಗೆ ಶ್ರೀ ದೇವರಿಗೆ ನವಕ ಕಲಶಾಭಿಷೇಕ, ಎಳನೀರು ಅಭಿಷೇಕ, ಭಜನಾ ಕಾರ್ಯಕ್ರಮ, – ಮಂತ್ರಾಕ್ಷತೆ, ಅನ್ನಸಂತರ್ಪಣೆಯೊಂದಿಗೆ – ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.