The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಅಂಕಣ-ಹವಾ ವೈವಿಧ್ಯ: ಇರುಳಲ್ಲಿ ಪವನನೊಂದಿಗೆ ಬಂದು ಅಬ್ಬರಿಸಿದ ವರುಣ..!

by ದಿ ಸುಳ್ಯ ಮಿರರ್ ಸುದ್ದಿಜಾಲ May 22, 2023
by ದಿ ಸುಳ್ಯ ಮಿರರ್ ಸುದ್ದಿಜಾಲ May 22, 2023
Share this article

*ಪಿ.ಜಿ.ಎಸ್.ಎನ್.ಪ್ರಸಾದ್.
ಸುಳ್ಯ: ರಾತ್ರಿ ವೇಳೆ ದಕ್ಷಿಣ ಕರ್ನಾಟಕದ ಹೆಚ್ಚಿನ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.. ಗಾಳಿ ಗುಡುಗು ಸಿಡಿಲು ಸಹಿತ ಅನೇಕ ಕಡೆಗಳಲ್ಲಿ ಭರ್ಜರಿ ಮಳೆ ಸುರಿದಿದೆ. ರಣ ಬಿಸಿಲಿನ ಬೇಗೆಗೆ ಬಸವಳಿದಿದ್ದ ರೈತನ ಮೊಗದಲ್ಲಿ ಮಂದಹಾಸ ಮೂಡಿದೆ. ನಾಲ್ಕಾರು ದಿನಗಳ ಬಳಿಕ ಮತ್ತೆ ಇನ್ನೇನು ತೋಟಗಳಿಗೆ ನೀರು ಹಾಯಿಸಬೇಕೆನ್ನುವಷ್ಟರಲ್ಲಿ ವರುಣ ಕೃಪೆ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ತೋರಿದ್ದಾನೆ. ನೈರುತ್ಯ ಮುಂಗಾರು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮುಂದುವರಿಯಲು ಮೀನ ಮೇಷ ಎಣಿಸುತ್ತಿದೆ. ಈಗಿನ ಅಂದಾಜಿನ ಪ್ರಕಾರ ಜೂನ್ ಪ್ರಥಮ ವಾರವಷ್ಟೇ ಕೇರಳಕ್ಕೆ ಕಾಲಿಡಬಹುದು ಎನ್ನಲಾಗಿದೆ. ಕಳೆದ ವರ್ಷ ಮೇ ಮೂರನೇ ವಾರದಲ್ಲೇ ಕರ್ನಾಟಕ ಕರಾವಳಿ ಪ್ರವೇಶಿಸಿತ್ತು ನೈರುತ್ಯ ಮುಂಗಾರು ಮಾರುತ.. ಆದರೆ IMD ಅಧಿಕೃತ ಘೋಷಣೆ ಮಾಡಿರುವುದು 2022 ರ ಮೇ 30 ರಂದು.
ಕಳೆದ ಸಂಜೆ ಬೆಂಗಳೂರಲ್ಲಿ ಗಾಳಿ, ಭಾರೀ ಗಾತ್ರದ ಆಲಿಕಲ್ಲು ಸಹಿತ

ಭರ್ಜರಿ ಮಳೆ ಸುರಿದ ಬಗ್ಗೆ ವರದಿಯಾಗಿದೆ. ರಾತ್ರಿ ದಕ್ಷಿಣ ಕನ್ನಡದ ಹೆಚ್ಚಿನ ಕಡೆಗಳಲ್ಲಿ ಗುಡುಗು ಗಾಳಿ ಸಹಿತ ಭರ್ಜರಿ ಮಳೆ ಸುರಿದಿದೆ. ಭಾರೀ ಗಾಳಿಗೆ ಸಾಕಷ್ಟು ಹಾನಿಯೂ ಸಂಭವಿಸಿದೆ. ಗರಿಷ್ಟ ಮಳೆ ಸುಳ್ಯ ತಾಲೂಕು ಗುತ್ತಿಗಾರಿನ ಕಮಿಲದಲ್ಲಿ 68 ಮಿ.ಮೀ., ಬಳ್ಪ-ಪಟೋಳಿ 61, ದೊಡ್ಡತೋಟ- ಕೀಲಾರ್ಕಜೆ 51, ಕಲ್ಲಾಜೆ, ಸುಬ್ರಹ್ಮಣ್ಯ(ಸರಾಸರಿ) ತಲಾ 44, ಕಲ್ಮಡ್ಕ 42,ಬಳ್ಪ 35, ಕರಿಕ್ಕಳ 32, ಮೆಟ್ಟಿನಡ್ಕ 31, ಕೇನ್ಯ 28, ಕಡಬ- 26, ಕೋಡಿಂಬಳ 25, ಎಣ್ಮೂರು-ಅಲೆಂಗಾರ 22, ಬಾಳಿಲ 21, ಅಯ್ಯನಕಟ್ಟೆ, ಎಣ್ಮೂರು ತಲಾ 20, ಹೇಮಳ 19, ಮುರುಳ್ಯ, ಎಡಮಂಗಲ ತಲಾ 18, ಬೆಳ್ಳಾರೆ-ಕಾವಿನಮೂಲೆ 16, ಹರಿಹರ-ಮಲ್ಲಾರ 15, ಕಟ್ಟ-ಕೊಲ್ಲಮೊಗ್ರ, ಪೆಲತ್ತಡ್ಕ-ಪೆರುವಾಜೆ ತಲಾ 10, ಕಾಸರಗೋಡು-ಹಳೆಮನೆ 44, ಕಲ್ಲಕಟ್ಟ 20, ಪುತ್ತೂರು-ಬಂಗಾರಡ್ಕ 40, ಬೆಳ್ತಂಗಡಿ-ಮುಂಡಾಜೆ 48, ನಿಡ್ಲೆ 24, ಅಡೆಂಜ-ಉರುವಾಲು 18, ಪುತ್ತೂರು-ಶಾಂತಿಗೋಡು 17, ಕೊಳ್ತಿಗೆ-ಎಕ್ಕಡ್ಕ 14, ಬಲ್ನಾಡು 08, ಬೆಳ್ತಂಗಡಿ-ಇಳಂತಿಲ 09, ಅಲ್ಲಾಟ ಬಡಾವಣೆ 07, ಕಂಪದಕೋಡಿ 06, ಬಂಟ್ವಾಳ-ಕೆಲಿಂಜ 03 ಮಿ.ಮೀ.ನಷ್ಟು ಮಳೆಯಾಗಿದೆ. ಬೆಂಗಳೂರಿನ ಹೆಚ್ಚಿನ ಕಡೆಗಳಲ್ಲಿ ಭಾರೀ ಗಾತ್ರದ ಆಲಿಕಲ್ಲು, ವಿಪರೀತ ಗಾಳಿ, ಸಿಡಿಲು ಸಹಿತ ಮಳೆ ಬಂದ ಬಗ್ಗೆ ವರದಿಯಾಗಿದೆ.ಇಂದು ಕೂಡಾ ಅಲ್ಲಲ್ಲಿ ಮಳೆ ಸುರಿವ ಸಾಧ್ಯತೆ ಇದೆ.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಇಂದಿನಿಂದ ಮೂರು ದಿನ ನೂತನ ಸರ್ಕಾರದ ಮೊದಲ ಅಧಿವೇಶನ: ನೂತನ ಸದಸ್ಯರ ಪ್ರಮಾಣವಚನ
next post
ಮೊದಲ ಮಳೆಗೆ ಕುಸಿದ ಕ್ರೀಡಾಂಗಣ ಕೆಳ ಭಾಗದಲ್ಲಿ ಹಾಕಿದ‌ ಮಣ್ಣು: ಆತಂಕದಲ್ಲಿ ಗ್ರೌಂಡ್‌ನ ಕೆಳಭಾಗದ ಜನತೆ..!ಒಂದು ವರ್ಷ ಕಳೆದರೂ ಭರವಸೆಯಲ್ಲಿಯೇ ಉಳಿದ ತಡೆಗೋಡೆ..!

You may also like

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

ಡೆಂಗ್ಯೂ, ಮಲೇರಿಯಾ ಬಗ್ಗೆ ಮುನ್ನೆಚ್ಚರಿಕೆ ಇರಲಿ: ಡಾ. ಕುಮಾರ್

June 6, 2023

ನೈತಿಕ ಪೊಲೀಸ್​ಗಿರಿ ತಡೆಗೆ ‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ: ಗೃಹ...

June 6, 2023

ಸಂಪಾಜೆ ಗ್ರಾಮದ ಮೂಲಭೂತ ಅಭಿವೃದ್ಧಿಗಾಗಿ ಹೋರಾಟ: ಸಂಪಾಜೆ ಮೂಲಭೂತ ಸೌಕರ್ಯಗಳ...

June 6, 2023

ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಉಚಿತ ವಿದ್ಯುತ್: ಸಿಎಂ ಸಿದ್ದರಾಮಯ್ಯ

June 6, 2023

200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಮಾರ್ಗಸೂಚಿ...

June 5, 2023

ಮುಂದಿನ 48 ಗಂಟೆಗಳಲ್ಲಿ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶ ಸಾಧ್ಯತೆ:...

June 5, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ನಗರ ಸ್ವಚ್ಛತಾ ಅಭಿಯಾನ: ಆಲೆಟ್ಟಿ ರಸ್ತೆಯಲ್ಲಿ 37ನೇ ವಾರದ ಸ್ವಚ್ಛತಾ ಕಾರ್ಯಕ್ರಮ
  • ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
  • ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೆಶ್ವರ್ ಅವರಿಗೆ ಸನ್ಮಾನ
  • ಹನಿ‌ ಸುರಿಸಿ ಮಾಯವಾದ ವರುಣ: ಮುಂದುವರಿದ ಮಳೆಯ ಕಣ್ಣಾ ಮುಚ್ಚಾಲೆ
  • ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ಭಾರತ ವಿರುದ್ಧ ಬೃಹತ್ ಮೊತ್ತದತ್ತ ಆಸ್ಟ್ರೇಲಿಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ