ಸುಳ್ಯ: ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿ ಅವರು ಸಮಾಚಾರ ಸೇವಾ ಸಂಘ ಗೋಕಾಕ ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ಪ್ರಯುಕ್ತ ನೀಡುವ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾಗಿದ್ದಾರೆ. ಸೆ. 24ರಂದು ಬೆಳಗಾವಿಯ
ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯುವ ‘ಗುರುವಂದನಾ’ ಕಾರ್ಯಕ್ರಮದಲ್ಲಿ ‘ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ಉಪನ್ಯಾಸಕಿಯಾಗಿರುವ ಅನುರಾಧಾ ಕುರುಂಜಿ ಪದ್ಮಯ್ಯ ಗೌಡ ಮತ್ತು ದಿ. ಸೀತಮ್ಮ ಕುರುಂಜಿ ದಂಪತಿಗಳ ಪುತ್ರಿ ಹಾಗೂ ಕೆವಿಜಿ ಪಾಲಿಟೆಕ್ನಿಕ್ ನ ಶಿಕ್ಷಕ ಚಂದ್ರಶೇಖರ್ ಬಿಳಿನೆಲೆಯವರ ಪತ್ನಿ .