ಸುಳ್ಯ:ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಮಾ.15ರಿಂದ 18ರ ತನಕ ನಡೆಯಲಿದೆ. 4 ದಿನದ ದೈವಂಕಟ್ಟು ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತಿದೆ ಎಂದು ಮಹೋತ್ಸವ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಅರಂಬೂರು ವಯನಾಟ್ ಕುಲವನ್ ದೈವಸ್ಥಾನದಲ್ಲಿ ಕರೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಮಹೋತ್ಸವ ಸಮಿತಿಯ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಕುತ್ತಿಕೋಲು ಶ್ರೀ ತಂಬೂರಾಟಿ ಭಗವತಿ ಕ್ಷೇತ್ರದ ಪರಿಧಿಯಲ್ಲಿ ಬರುವ ಸುಳ್ಯ ಪ್ರಾದೇಶಿಕ ಸಮಿತಿಯ
ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನ ಸುಮಾರು 20 ವರ್ಷಗಳ ಹಿಂದೆ ಪುನರ್ ಪ್ರತಿಷ್ಠಾ ಮಹೋತ್ಸವ ನಡೆದಿತ್ತು. ಇದೀಗ ದೈವಸ್ಥಾನದಲ್ಲಿ ಕೆಲವೊಂದು ಅಭಿವೃದ್ಧಿ ಕಾರ್ಯಗಳು ನಡೆದು ದೈವಂಕಟ್ಟು ಮಹೋತ್ಸವಕ್ಕೆ ಅಣಿಯಾಗುತಿದೆ. ಸುಮಾರು 300 ವರ್ಷಗಳ ಬಳಿಕ ಇಲ್ಲಿ ದೈವಂಕಟ್ಟು ಉತ್ಸವ ನಡೆಯಲಿದೆ. ಎಲ್ಲರ ಸಹಕಾರದಲ್ಲಿ ಉತ್ಸವ ನಡೆಯಲಿದ್ದು, 4 ದಿನದ ಉತ್ಸವದಲ್ಲಿ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಪಾರ್ಕಿಂಗ್, ಊಟದ ವ್ಯವಸ್ಥೆ, ಜನರಿಗೆ ಕುಳಿತು ಕೊಳ್ಳುವ ವ್ಯವಸ್ಥೆ ಸೇರಿ ಸಕಲ ವ್ಯವಸ್ಥೆಗಳು ನಡೆಸಲಾಗುತಿದೆ ಎಂದು ಅವರು ವಿವರಿಸಿದರು.
ಮಹೋತ್ಸವಕ್ಕೆ ಫೆ.20ರಂದು ಪೂ.11.38 ರಿಂದ 1.24ರ ಮಧ್ಯೆ ಕೂವಂ ಅಳಕ್ಕಲ್(ಭತ್ತ ಅಳೆಯುವುದು) ನಡೆಯಲಿದೆ. ನಂತರ ವೀಳ್ಯ ಕೊಡುವುದು, ಪ್ರಸಾದ ವಿತರಣೆ, ಸಂಜೆ 6.30ರಿಂದ ದರ್ಶನ ಕೈವೀದ್ ನಡೆಯಲಿದೆ.

ಮಾ.15ರಂದು ಶನಿವಾರ ಪೂ.10 ರಿಂದ ಹಸಿರುವಾಣಿ ಮೆರವಣಿಗೆ ಶ್ರೀ ಮೂಕಾಂಬಿಕ ಭಜನಾ ಮಂದಿರದ ವಠಾರದಿಂದ ಹೊರಡಲಿದೆ.ಪೂ.ಗಂಟೆ 11.15 ರಿಂದ 12.20ರ ಒಳಗೆ ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು).ರಾತ್ರಿ 7.00 ರಿಂದ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು.ರಾತ್ರಿ 10 ರಿಂದ ಶ್ರೀ ಕೊರ್ತಿಯಮ್ಮನ ಕೋಲಗಳು ರಾತ್ರಿ 1.30 ರಿಂದ
ಶ್ರೀ ಪೊಟ್ಟನ್ ದೈವ.
ಮಾ.16ರಂದು ಆದಿತ್ಯವಾರ ಪೂ.9ರಿಂದ ಶ್ರೀ ವಿಷ್ಣುಮೂರ್ತಿ ದೈವ ಪೂ.10:30 ರಿಂದ ಶ್ರೀ ಚಾಮುಂಡಿಯಮ್ಮ ಮಧ್ಯಾಹ್ನ ಗಂಟೆ 12.30ರಿಂದ ಶ್ರೀ ಗುಳಿಗ ದೈವ,ಸಂಜೆ 6ರಿಂದ ಕೈವೀದ್ ನಂತರ ಶ್ರೀ ವಯನಾಟ್ ಕುಲವನ್ ಹಾಗೂ ಸಪರಿವಾರ ದೈವಗಳಿಗೆ ಕೂಡುವುದು. ಮಾ.17ರಂದು ಸೋಮವಾರ ಅಪರಾಹ್ನ 2 ರಿಂದ ಶ್ರೀ ಕಾರ್ನವನ್ ದೈವದ ವೆಳ್ಳಾಟಂ ಅಪರಾಹ್ನ 4 ರಿಂದ ಶ್ರೀಕೋರಚ್ಚನ್ ದೈವದ ವೆಳ್ಳಾಟಂ, ಸಂಜೆ 7 ರಿಂದ ಶ್ರೀಕಂಡನಾರ್ ಕೇಳನ್ ದೈವದ ವೆಳ್ಳಾಟಂ, ರಾತ್ರಿ 11ರಿಂದ ನಂತರ ಬಪ್ಪಿಡಲ್, ಶ್ರೀ ವಿಷ್ಣುಮೂರ್ತಿದೈವಕ್ಕೆ ಕೂಡುವುದು. ರಾತ್ರಿ 12 ರಿಂದ ಶ್ರೀವಯನಾಟ್ ಕುಲವನ್ ದೈವದ ವೆಳ್ಳಾಟಂ

ಮಾ.18 ಮಂಗಳವಾರ ಪೂರ್ವಾಹ್ನ 9ರಿಂದ ಶ್ರೀ ಕಾರ್ನವನ್ ದೈವ 11ರಿಂದ ಶ್ರೀ ಕೋರಚ್ಚನ್ ದೈವ, ಮಧ್ಯಾಹ್ನ 1.00 ರಿಂದ ಶ್ರೀ ಕಂಡನಾರ್ ಕೇಳನ್ ದೈವ ಸಂಜೆ ಗಂಟೆ 4ರಿಂದ ಶ್ರೀ ವಯನಾಟ್ ಕುಲವನ್ ದೈವ ಸೂಟೆ ಸಮರ್ಪಣೆ. ಸಂಜೆ 5 ರಿಂದ ಶ್ರೀ ವಿಷ್ಣುಮೂರ್ತಿ ದೈವ ರಾತ್ರಿ 1ರಿಂದ ಮರ ಪಿಳರ್ಕಲ್ ನಂತರ ಕೈವೀದ್ ನಡೆಯಲಿದೆ ಎಂದು ಸುಧಾಕರ ರೈ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಹಿರಿಯರಾದ ಕೃಷ್ಣ ಕಾಮತ್ ಅರಂಬೂರು, ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪವಿತ್ರನ್ ಗುಂಡ್ಯ, ಕೋಶಾಧಿಕಾರಿ ಜತ್ತಪ್ಪ ರೈ, ಆಡಳಿತ ಸಮಿತಿ ಅಧ್ಯಕ್ಷ ನಾರಾಯಣ ಬಾರ್ಪಣೆ, ಆಡಳಿತ ಸಮಿತಿ ಕೋಶಾಧಿಕಾರಿ ರಧೀಶನ್ ಅರಂಬೂರು, ಕುಟುಂಬದ ಯಜಮಾನ ಕುಂಞಿಕಣ್ಣ.ಎ, ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಎನ್.ಎ.ರಾಮಚಂದ್ರ, ನಾರಾಯಣ ಕೇಕಡ್ಕ, ಕೆ.ಎಸ್.ಕೃಷ್ಣಪ್ಪ ಕೆದಂಬಾಡಿ, ರಾಧಾಕೃಷ್ಣ ಪರಿವಾರಕಾನ, ಪದ್ಮಯ್ಯ ಪಡ್ಪು, ಕುಂಞಿರಾಮನ್ ಶ್ರೀಶೈಲಂ,
ಪ್ರಮುಖರಾದ ಕೊರಗಪ್ಪ ಮಾಸ್ತರ್ ಕಣಕ್ಕೂರು, ಜಯಪ್ರಕಾಶ್ ಕುಂಚಡ್ಕ, ಎ.ಸಿ.ವಸಂತ, ಅಶೋಕ ಪೀಚೆ, ಗಂಗಾಧರ ನೆಡ್ಚಿಲ್, ಜಯಪ್ರಕಾಶ್ ಅರಂಬೂರು ಮತ್ತಿತರರು ಇದ್ದರು.