ಅರಂತೋಡು:ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಿಸಲಾದ ಅಮೃತ ಉದ್ಯಾನವನ, ಅಮೃತ ಮುಕ್ತಿ ಧಾಮ ಹಾಗೂ ಅಮೃತ ಸಭಾಂಗಣದ ಉದ್ಘಾಟನೆ ಮಾ.25ರಂದು ನಡೆಯಲಿದೆ. ನೂತನ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅರಂತೋಡು
ಗ್ರಾ.ಪಂ. ಅಧ್ಯಕ್ಷೆ ಹರಿಣಿ ಡಿ.ಡಿ. ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ . ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ, ಸುಳ್ಯ ತಾಲೂಕು ಪಂಚಾಯತ್ ಅಧಿಕಾರಿ ಭವಾನಿಶಂಕರ ಎನ್.,
ಪಂಚಾಯತ್ರಾಜ್ ಇಂಜಿನಿಯರಿಂಗ್ ಇಲಾಖೆಯ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಹೆಚ್. ಹನುಮಂತರಾಯಪ್ಪ, ಜಿ.ಪಂ. ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಸುಳ್ಯ ತಾ.ಪಂ. ಮಾಜಿ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಅರಂತೋಡು ಗ್ರಾ.ಪಂ. ಉಪಾಧ್ಯಕ್ಷೆ ಶ್ವೇತಾ.ಎ., ಮಾಜಿ ಅಧ್ಯಕ್ಷೆ ಲೀಲಾವತಿ ಕೋಡಂಕೇರಿ, ವಿಶ್ರಾಂತ ಪ್ರಾಂಶುಪಾಲರು ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆರ್. ಗಂಗಾಧರ, ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಧ್ಯಕ್ಷ ಕಿಶೋರ್ ಕುಮಾರ್ ಯು ಎಂ, ಅರಂತೋಡು ಶ್ರೀ ಮಲ್ಲಿಕಾರ್ಜುನ ಭಜನಾ ಮಂಡಳಿ ಅಧ್ಯಕ್ಷ ಕೆ.ಆರ್.ಪದ್ಮನಾಭ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಪಾಜೆ ವಲಯ ಮೇಲ್ವಿಚಾರಕರು ಸುಧೀರ್ ನೆಕ್ರಾಜೆ ಭಾಗವಹಿಸಲಿದ್ದಾರೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್. ತಿಳಿಸಿದ್ದಾರೆ.