ಅರಂತೋಡು: ಅರಂತೋಡು- ತೊಡಿಕಾನ ಪ್ರಾಥಮಿಕ ಕೃಷಿ ಪತ್ತನ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.28ರಂದು ನಡೆದ ಚುನಾವಣೆಯಲ್ಲಿ ಮತ ಎಣಿಕೆ ಮುಗಿದ ಏಳು ಸ್ಥಾನಗಳಲ್ಲಿ
ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಭರ್ಜರಿ ಗಲುವು ಸಾಧಿಸಿದ್ದಾರೆ.ಮಹಿಳಾ ಮೀಸಲು ಕ್ಷೇತ್ರದಿಂದ
ಶ್ರೀಲತಾ ದೇರಾಜೆ, ಲೋಚನ ಕೊಳಲುಮೂಲೆ . ಹಿಂದುಳಿದ ವರ್ಗ ಎ ಮೀಸಲು ಸ್ಥಾನದಿಂದ ಚಂದ್ರಶೇಖರ ಎ.ಎಸ್, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನಕ್ಕೆ ಡಾ.ಲಕ್ಷ್ಮೀಶ ಕಲ್ಲುಮುಟ್ಲು, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ದಿನೇಶ್ ಅರಮನೆಗಯ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಪದ್ಮಯ್ಯ ಅಡ್ಯಡ್ಕ ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ ಪ್ರಶಾಂತ ಕಾಪಿಲ ಗೆಲುವು ಸಾಧಿಸಿದ್ದಾರೆ. ಏಳು ಮಂದಿ ಕೂಡ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು. ಸಾಮಾನ್ಯ ಕ್ಷೇತ್ರದ 5 ಕ್ಷೇತ್ರಗಳ ಮತ ಎಣಿಕೆ ನಡೆಯುತಿದೆ.
ಸಂಘದ 12 ಮಂದಿ ನಿರ್ದೇಶಕರ ಸ್ಥಾನಕ್ಕೆ ಡಿ.28 ರಂದು ಪೂ.9ರಿಂದ ಸಂಜೆ 4ರ ತನಕ ತೆಕ್ಕಿಲ್ ಸಮುದಾಯ ಭವನದಲ್ಲಿ ಚುನಾವಣೆ ನಡೆದು ಮತ ಎಣಿಕೆ ನಡೆಯುತಿದೆ.