The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಅರೆಭಾಷೆ ಅಕಾಡೆಮಿಯಿಂದ ಅರೆಭಾಷೆ ಕೈಪಿಡಿ, ನಾಟಕ, ಕತೆ ಸೇರಿ 14 ಪುಸ್ತಕಗಳ ಬಿಡುಗಡೆ

by ದಿ ಸುಳ್ಯ ಮಿರರ್ ಸುದ್ದಿಜಾಲ October 14, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 14, 2022
Share this article

ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟಿಸಲಾಗಿರುವ ಅರೆಭಾಷೆ ವಿಶ್ವಕೋಶ ಹಾಗೂ ಗ್ರಾಂಥಿಕ ಕನ್ನಡ ಮತ್ತು ಅರೆಭಾಷೆ ತೌಲನಿಕ ವ್ಯಾಕರಣ, ಅರೆಭಾಷೆ ಕೈಪಿಡಿ, ನಾಟಕ ಕತೆ, ಲಲಿತ ಪ್ರಬಂಧ, ಅರೆಭಾಷೆ ಸಾಧಕರ ಮಾಲೆ ಸೇರಿದಂತೆ ಒಟ್ಟು 14 ಪುಸ್ತಕಗಳನ್ನು ನಗರದ ಭಾರತೀಯ ವಿದ್ಯಾಭವನದಲ್ಲಿ ಗುರುವಾರ ಬಿಡುಗಡೆ ಮಾಡಲಾಯಿತು. ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು ವಿಶ್ವವಿದ್ಯಾಲಯ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಹಾ.ತಿ.ಕೃಷ್ಣೇಗೌಡ ವೈವಿದ್ಯತೆಯಲ್ಲಿ ಏಕತೆ ಹೊಂದಿರುವ ಭಾರತ ದೇಶದಲ್ಲಿ ಸಂಸ್ಕೃತಿಯ ಜ್ಞಾನವನ್ನು ಗಳಿಸಿಕೊಂಡು ಹೋಗಬೇಕು. ಆ ನಿಟ್ಟಿನಲ್ಲಿ ಅರೆಭಾಷೆ ಅಕಾಡೆಮಿ ವತಿಯಿಂದ ಹೊರತರಲಾಗಿರುವ ‘ವಿಶ್ವಕೋಶ’ ಪುಸ್ತಕವು ಒಂದು ಗ್ರಂಥವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು
ಅರೆಭಾಷೆ ಅಕಾಡೆಮಿಯಿಂದ ಪ್ರಕಟಿಸಲಾಗಿರುವ ಪುಸ್ತಕ ಕುರಿತು ಮಾತನಾಡಿದ ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ವಿಶ್ವನಾಥ ಬದಿಕಾನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವು ಕೊಡಗು, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಪ್ರದೇಶದಲ್ಲಿ ವಿಭಿನ್ನವಾಗಿದೆ. ಆ ನಿಟ್ಟಿನಲ್ಲಿ ಈಗ ಪ್ರಕಟಿಸಲಾಗಿರುವ ಪುಸ್ತಕಗಳು ಸಹ ಆಯಾಯ ಪ್ರದೇಶದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಒಳಗೊಂಡಿದೆ ಎಂದು ಅವರು ಹೇಳಿದರು.
ಅರೆಭಾಷೆ ಅಕಾಡೆಮಿಯಿಂದ ಹೊರತರಲಾದ ಪುಸ್ತಕಗಳು ಅರೆಭಾಷೆ ಸಂಸ್ಕೃತಿ ಮತ್ತು ಇತಿಹಾಸವನ್ನು ತಿಳಿದುಕೊಳ್ಳುವ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಒಳಗೊಂಡಿದೆ. ಆ ದಿಸೆಯಲ್ಲಿ ಎಲ್ಲರೂ ಅರೆಭಾಷೆಯನ್ನು ಕಟ್ಟಿ ಬೆಳೆಸುವಂತಾಗಬೇಕು. ಪದಕೋಶ, ವಿಶ್ವಕೋಶ, ಪಾರಂಪರಿಕ ವಸ್ತುಕೋಶ ಹೀಗೆ ಹಲವು ಪುಸ್ತಕಗಳು ಜತನ ಮಾಡಿಕೊಂಡು ಓದುವ ಪುಸ್ತಕವಾಗಿದೆ ಎಂದು ವಿಶ್ವನಾಥ ಬದಿಕಾನ ಅವರು ನುಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು.
ಮೈಸೂರು ಶೇಷಾದ್ರಿಪುರಂ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಲಾವಣ್ಯ ಸಿ,ಪಿ., ಕೊಟ್ಟಕೇರಿಯನ ಮಾತನಾಡಿದರು.
ಕಟ್ರತನ ಲಲಿತಾ ಅಯ್ಯಣ್ಣ (ಗೂಡಿಗೆ ಮರಳಿದ ಹಕ್ಕಿ), ಲೀಲಾ ದಾಮೋದರ ಕುಂದಲ್ಪಾಡಿ(ಗುಬ್ಬಿ ಗೂಡಿನ ಚಿಲಿಪಿಲಿ), ಅರೆಭಾಷೆ ಪ್ರಬಂಧ, ಅರೆಭಾಷೆ ಪದ್ಯ, ಅರೆಭಾಷೆ ಕೈಪಿಡಿ ಇತರ ಪುಸ್ತಕ ಬಿಡುಗಡೆ ಮಾಡಲಾಯಿತು.

ಅರೆಭಾಷೆ ಅಕಾಡೆಮಿ ಪ್ರಕಟಿತ 14 ಪುಸ್ತಕಗಳು, ಅಕಾಡೆಮಿಯ ದಶವರ್ಷ ಸ್ಮರಣ ಸಂಚಿಕೆ ಹಾಗೂ ಚಿತ್ರಕಲಾ ಶಿಬಿರದ ನೆನಪಿನ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.
ಅರೆಭಾಷೆ ಸಾಧಕರ ಮಾಲೆ ಪುಸ್ತಕ ಬರೆದಿರುವ ಬಾರಿಯಂಡ ಜೋಯಪ್ಪ, ಅಮೆ ಪಾಲಾಕ್ಷ, ಡಾ.ಪೂವಪ್ಪ ಕಣಿಯೂರು, ಡಾ.ಅನುರಾಧ ಕುರುಂಜಿ, ಅಕಾಡೆಮಿ ಸದಸ್ಯರಾದ ಬೈತಡ್ಕ ಜಾನಕಿ ಬೆಳ್ಯಪ್ಪ, ಸ್ಮಿತಾ ಅಮೃತರಾಜ್, ಚೊಕ್ಕಾಡಿ ಪ್ರೇಮ ರಾಘವಯ್ಯ, ಧನಂಜಯ ಅಗೋಳಿಕಜೆ, ಡಾ.ದಯಾನಂದ ಕೂಡಕಂಡಿ, ಎ.ಟಿ.ಕುಸುಮಾಧರ, ಜಯಪ್ರಕಾಶ್ ಮೊಂಟಡ್ಕ, ಪುರುಷೋತ್ತ ಕಿರ್ಲಾಯ, ಡಾ.ಪುರುಷೋತ್ತಮ ಕರಂಗಲ್ಲು, ಕಿರಣ್ ಕುಂಬಳಚೇರಿ, ಭರತೇಶ್ ಅಲಸಂಡೆಮಜಲು, ರಿಜಿಸ್ಟ್ರಾರ್ ಚಿನ್ನಸ್ವಾಮಿ ಉಪಸ್ಥಿತರಿದ್ದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
15ದಿನದಲ್ಲಿ ಸುರತ್ಕಲ್ ಟೋಲ್ ಗೇಟ್ ಸಮಸ್ಯೆಪರಿಹಾರ: ವತಾರೆ
next post
ಇಂದು ಮಂಡೆಕೋಲಿನಲ್ಲಿ ದ.ಕ. ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

You may also like

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳ ಪುನಶ್ಚೇತನ ಶಿಬಿರ:...

May 28, 2023

ಎ.5 ರಂದು ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ ನೆನಪಿನ ಕಾರ್ಯಕ್ರಮ,

April 2, 2023

ಕಸಾಪ ವತಿಯಿಂದ ವಿವಿಧ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ: ಡಾ.ದಾಮ್ಲೆ,...

March 13, 2023

ಕವಯತ್ರಿ ಪ್ರಿಯಾ ಸುಳ್ಯ ಅವರ ಚೊಚ್ಚಲ ಕವನ ಸಂಕಲನ ‘ನಾನು,...

March 7, 2023

ಕಸಾಪ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಯ್ಕೆ: ಡಾ.ಚಂದ್ರಶೇಖರ ದಾಮ್ಲೆ,...

February 16, 2023

ಹಂಪಿ ಉತ್ಸವದ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ

January 25, 2023

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಬಿಡುಗಡೆ

January 23, 2023

ಸುಳ್ಯ ಕ.ಸಾ.ಪ.ವತಿಯಿಂದ ನಾಡೋಜ ಸಾರಾ ಅಬೂಬಕ್ಕರ್ ರವರಿಗೆ ನುಡಿನಮನ

January 20, 2023

ಸಾರಾ ಅಬೂಬಕ್ಕರ್ ಅವರ ನಿಧನಕ್ಕೆ ಸಂತಾಪ

January 10, 2023

ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ

January 10, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ನಗರ ಸ್ವಚ್ಛತಾ ಅಭಿಯಾನ: ಆಲೆಟ್ಟಿ ರಸ್ತೆಯಲ್ಲಿ 37ನೇ ವಾರದ ಸ್ವಚ್ಛತಾ ಕಾರ್ಯಕ್ರಮ
  • ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
  • ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೆಶ್ವರ್ ಅವರಿಗೆ ಸನ್ಮಾನ
  • ಹನಿ‌ ಸುರಿಸಿ ಮಾಯವಾದ ವರುಣ: ಮುಂದುವರಿದ ಮಳೆಯ ಕಣ್ಣಾ ಮುಚ್ಚಾಲೆ
  • ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ಭಾರತ ವಿರುದ್ಧ ಬೃಹತ್ ಮೊತ್ತದತ್ತ ಆಸ್ಟ್ರೇಲಿಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ