ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ಗೌರವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ರಾಷ್ಟ್ರ ಪ್ರಶಸ್ತಿ ವಿಜೇತ ಕೆ.ಆರ್.ಗಂಗಾಧರ, ಡಾ.ಯು.ಪಿ.ಶಿವಾನಂದ, ದಂಬೆಕೋಡಿ ಸುಬ್ರಾಯ ಆನಂದ ಅವರಿಗೆ ಪ್ರಶಸ್ತಿ ನೀಡಲಾಗುವುದು ಎಂದು
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿಯ.ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು
ನ.30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.ಈ ಪ್ರಶಸ್ತಿಯು 50 ಸಾವಿರ ನಗದು ಹಾಗೂ ಫಲಕವನ್ನು ಹೊಂದಿದೆ. ಅರೆಭಾಷೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗುತಿದೆ.
ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕರಾದ ಕೆ.ಆರ್.ಗಂಗಾಧರ ಅವರು ಅರೆಭಾಷೆ ನಿಘಂಟು ರಚನೆ ಮಾಡಿ ಅರಭಾಷೆಗೆಗೆ ದೊಡ್ಡ ಕೊಡುಗೆ ನೀಡಿದ್ದಾರೆ.ಕೊಡಗು ದಕ್ಷಿಣ ಕನ್ನಡ ಒಕ್ಕಲಿಗರ ಯಾನೆ ಗೌಡ ಸಮಾಜದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ದಂಬೆಕೋಡಿ ಸುಬ್ರಾಯ ಆನಂದ ಅವರು

ರಾಜ್ಯಾದ್ಯಂತ ಅರೆಭಾಷಿಕರನ್ನು ಸಂಘಟಿಸುವಲ್ಲಿ ಶ್ರಮ ವಹಿಸಿದ್ದರು. ಗ್ರಾಮೀಣ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕ್ರಾಂತಿ ಮಾಡಿರುವ ಡಾ.ಯು.ಪಿ ಶಿವಾನಂದ ಅವರು ಗ್ರಾಮೀಣ ಭಾಗಗದಲ್ಲಿ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ. ಆಯ್ಕೆ ಸಮಿತಿಯು ಈ
ಈ ಮೂವರನ್ನು 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಕೆ.ಆರ್.ಗಂಗಾಧರ, ಡಾ.ಯು.ಪಿ.ಶಿವಾನಂದ, ದಂಬೆಕೋಡಿ ಸುಬ್ರಾಯ ಆನಂದ
ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಅಕಾಡೆಮಿಯ ವತಿಯಿಂದ ನಿರ್ಮಿಸುವ ‘ಅಪ್ಪ’ ಅರೆಭಾಷೆ ನಾಟಕ ಪ್ರದರ್ಶನಗೊಳ್ಳಲಿದೆ.ಅಕಾಡೆಮಿ ವತಿಯಿಂದ
ಅರೆಭಾಷೆ ಪುಸ್ತಕಗಳ ಪ್ರಕಟಣೆ, ಐನ್ಮನೆ ಸಾಕ್ಷ್ಯ ಚಿತ್ರ ತಯಾರಿಕೆ ಮತ್ತಿತರ ಚಟುವಟಿಕೆಗಳು ನಡೆಸಲಾಗುತಿದೆ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಅಕಾಡೆಮಿ ಸದಸ್ಯರಾದ ಡಾ.ಎನ್.ಎ. ಜ್ಞಾನೇಶ್, ತೇಜಕುಮಾರ್ ಕುಡೆಕಲ್ಲು , ಚಂದ್ರಶೇಖರ ಪೇರಾಲು, ಲೋಕೇಶ್ ಊರುಬೈಲು,ಚಂದ್ರಾವತಿ ಬಡ್ಡಡ್ಕ ಉಪಸ್ಥಿತರಿದ್ದರು.












