ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಕೇರಳದ ಉದುಮ ಶಾಸಕರಾದ ಸಿ.ಎಚ್.ಕುಂಞಂಬು ಅವರನ್ನು ಭೇಟಿ ಮಾಡಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಗ್ರಾಮ
ಗೌಡ ಸಮಿತಿ ಬಂದಡ್ಕ ಇದರ ಸಹಕಾರದಲ್ಲಿ ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಅ.27ರಂದು ನಡೆಯುವ ಅರೆಭಾಷೆ ಗಡಿನಾಡ ಉತ್ಸವದ ಸಮಾರೋಪ ಸಮಾರಂಭ, ಸನ್ಮಾನ ಸಮಾರಂಭದ ಉದ್ಘಾಟಕರಾದ ಸಿ.ಎಚ್.ಕುಂಞಂಬು ಅವರನ್ನು ಭೇಟಿ ಮಾಡಿ ಆಮಂತ್ರಣ ನೀಡಿ ಆಮಂತ್ರಿಸಲಾಯಿತು. ಈ ಸಂದರ್ಭದಲ್ಲಿ ಸದಾನಂದ ಮಾವಜಿ ಅವರು ಸಿ.ಎಚ್.ಕುಂಞಂಬು ಅವರನ್ನು ಸನ್ಮಾನಿಸಿ ಗೌರವಿಸಿದರು.
ಅರೆಬಾಷೆ ಅಕಾಡೆಮಿಯ ಸದಸ್ಯ ಚಂದ್ರಶೇಖರ ಪೇರಾಲು , ಕಾರಡ್ಕ ಬ್ಲಾಕ್ ಪಂಚಾಯತ್ ಅಧ್ಯಕ್ಷ ಸಿಜು ಮ್ಯಾತ್ಯು ಮತ್ತಿತರರು ಉಪಸ್ಥಿತರಿದ್ದರು.