ಆಲೆಟ್ಟಿ; ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಅರೆಭಾಷಿಕರ ಐನ್ ಮನೆ ಐಸಿರಿ ಕಾರ್ಯಕ್ರಮ ಮಾ.30ರಂದು ಆಲೆಟ್ಟಿ ಗ್ರಾಮದ ಕುಡೆಕಲ್ಲು ಐನ್ ಮನೆ ವಠಾರದಲ್ಲಿ ನಡೆಯಿತು.ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅರೆಭಾಷೆ ಸಂಸ್ಕೃತಿ ಮತ್ತು ಭಾಷೆಯನ್ನು ಬೆಳೆಸಲು ಹಲವು ವಿನೂತನ ಕಾರ್ಯಕ್ರಮಗಳನ್ನು ಅಕಾಡೆಮಿ ವತಿಯಿಂದ ಹಮ್ಮಿಕೊಳ್ಳಲಾಗುತಿದೆ ಎಂದು ಹೇಳಿದರು.ಐನ್ ಮನೆ ಎನ್ನುವುದು ಎಲ್ಲರನ್ನು ಒಗ್ಗೂಡಿಸುವ
ಜಾಗ. ಇಲ್ಲಿ ನಮ್ಮ ಸಂಸ್ಕೃತಿ, ಪರಂಪರೆಯನ್ನು ತಿಳಿಸುವುದರೊಂದಿಗೆ ಅರೆಭಾಷೆಯನ್ನು ಕೂಡಾ ಬೆಳೆಸಲು ಪೂರಕವಾದ ಜಾಗವಾದುದರಿಂದ ಐನ್ ಮನೆಯಲ್ಲಿ ಅಕಾಡೆಮಿ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಕುಡೆಕಲ್ಲು ಐನ್ಮನೆಯ ವಂಶವೃಕ್ಷ ಚಾರ್ಟನ್ನು ಸದಾದ ಮಾವಜಿ ಅನಾವರಣಗೊಳಿಸಿದರು.ಕುಡೆಕಲ್ಲು ಕುಟುಂಬದ ಹಿರಿಯರಾದ ಸಾವಿತ್ರಿ ರವೀಂದ್ರನಾಥ್ ಕುಡೆಕಲ್ಲು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು.ಹಿಂಗಾರ ಪತ್ರಿಕೆಯನ್ನು ಆಲೆಟ್ಟಿ ಸಹಕಾರ ಸಂಘದ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ದ.ಕ.ಜೇನು ವ್ಯವಸಾಯಗಾರ ಸಹಕಾರ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್, ಅಕ್ರಮ – ಸಕ್ರಮ ಸಮಿತಿ ಸದಸ್ಯೆ ಗೀತಾ ಕೋಲ್ಚಾರ್, ಕುಡೆಕಲ್ಲು ಐನ್ ಮನೆಯ ಮಾಜಿ

ಆಡಳ್ತೆದಾರರಾದ ವಾಸುದೇವ ಗೌಡ ಕುಡೆಕಲ್ಲು, ಸುಳ್ಯ ಗೌಡರ ಯುವ ಸೇವಾ ಸಂಘದ ಉಪಾಧ್ಯಕ್ಷ ಯತಿರಾಜ ಭೂತಕಲ್ಲು, ಆಲೆಟ್ಟಿ ಗ್ರಾಮ ಗೌಡ ಸಮಿತಿ ಅಧ್ಯಕ್ಷ ಸತೀಶ್ ಕೊಯಿಂಗಾಜೆ, ಕುಡೆಕಲ್ಲು ಐನ್ ಮನೆ ಆಡಳ್ತೆದಾರ ಬಿಪಿನ್ ಕುಡೆಕಲ್ಲು, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಅಚ್ಚುತ ಮಾಸ್ತರ್ ನಾರ್ಕೋಡು ಭಾಗವಹಿಸಿದ್ದರು.

ಅಕಾಡೆಮಿ ಸದಸ್ಯರಾದ ಡಾ.ಎನ್.ಎ.ಜ್ಞಾನೇಶ್ ಸ್ವಾಗತಿಸಿದರು. ಕಾರ್ಯಕ್ರಮ ಸದಸ್ಯ ಸಂಯೋಜಕರಾದ ತೇಜ ಕುಮಾರ್ ಕುಡೆಕಲ್ಲು ಪ್ರಾಸ್ತಾವಿಕ ಮಾತನಾಡಿದರು. ಸದಸ್ಯರಾದ ಚಂದ್ರಶೇಖರ ಪೇರಾಲು ಹಿಂಗಾರ ಪತ್ರಿಕೆಯ ಕುರಿತು ಮಾತನಾಡಿದರು.
ಸದಸ್ಯ ಸಂಯೋಜಕರಾದ ವಿನೋದ್ ಮೂಡಗದ್ದೆ ಕಾರ್ಯಕ್ರಮ ನಿರ್ವಹಿಸಿದರು. ಅಕಾಡೆಮಿ ಸದಸ್ಯೆ ಲತಾ ಪ್ರಸಾದ್ ಕುದ್ಪಾಜೆ ವಂದಿಸಿದರು. ಅಕಾಡೆಮಿ ಸದಸ್ಯರಾದ ಚಂದ್ರಾವತಿ ಬಡ್ಡಡ್ಕ, ಪಿ.ಎಸ್.ಕಾರ್ಯಪ್ಪ, ಸೂದನ ಎಸ್.ಈರಪ್ಪ, ಲೋಕೇಶ್ ಊರುಬೈಲು, ಸಂದೀಪ್ ಪೂಳಕಂಡ, ಗೋಪಾಲ ಪೆರಾಜೆ ಉಪಸ್ಥಿತರಿದ್ದರು.
ಬಳಿಕ ಅರೆಭಾಷೆ ಐನ್ಮನೆಗಳ ಕುರಿತು ಉಪನ್ಯಾಸ ನಡೆಯಿತು. ಅರೆಭಾಷೆ ಪರಂಪರೆಯ ಸಂಶೋಧಕರಾದ ಅನಂತರಾಜ ಗೌಡ ಅಧ್ಯಕ್ಷತೆ ವಹಿಸಿದ್ದರು. ಅರೆಭಾಷೆ ಐನ್ಮನೆಗಳ ಆಡಳಿತ ವಿಷಯದ ಬಗ್ಗೆ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಭರತ್ ಹಾಗೂ ಕುಡೆಕಲ್ಲು ಐನ್ಮನೆಗಳ ಕುರಿತು ಮನೋಜ್ ಕುಡೆಕಲ್ಲು ಉಪನ್ಯಾಸ ನೀಡಿದರು.