ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಅರೆಭಾಷೆ ನಾಟಕ ನಿರ್ಮಾಣ ಮತ್ತು ರಂಗ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ನಡೆಯಿತು.ಕರ್ನಾಟಕ ಅರೆಭಾಷೆ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಜಯಪ್ರಕಾಶ್ ಮೋಂಟಡ್ಕ ದೀಪ ಬೆಳಗಿಸಿ
ಉದ್ಘಾಟಿಸಿ ಶುಭಹಾರೈಸಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಅರೆಭಾಷೆಯಲ್ಲಿ ನಡೆಯಲಿರುವ ನಾಟಕ ಒಳ್ಳೆಯ ಸಾಂಸಾರಿಕ ಕಥೆಯನ್ನು ಬಿಂಬಿಸಲಿದೆ. ಉತ್ತಮ ಕಲಾವಿದರ ಆಯ್ಕೆ ನಡೆದು ನಾಟಕ ಪ್ರಾಯೋಗಿಕವಾಗಿ ನಡೆದ ಬಳಿಕ ಬೆಂಗಳೂರಿನಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ರಂಗ ತರಬೇತುದಾರ ಮಹೇಶ್ ಆಚಾರಿ ಹೊನ್ನಾವರ, ಕರ್ನಾಟಕ ಅರೆಭಾಷೆ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ನಾಟಕ ಸಂಚಾಲಕ ಚಂದ್ರಶೇಖರ ಪೇರಾಲು, ಯೋಗ ತರಬೇತುದಾರರಾದ ಶಿಕ್ಷಕಿ ಸುನಂದ ಶೆಟ್ಟಿ, ನಾಟಕ ನಿರ್ದೇಶಕ ಲೋಕೇಶ್ ಊರುಬೈಲು ಅರೆಭಾಷೆ ನಾಟಕ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದರು. ಅರೆಭಾಷೆ ಅಕಾಡೆಮಿಯ ಸದಸ್ಯರಾದ ಚಂದ್ರಾವತಿ ಬಡ್ಡಡ್ಕ, ಲತಾ ಪ್ರಸಾದ್ ಕುದ್ಪಾಜೆ ಉಪಸ್ಥಿತರಿದ್ದರು.
ಅಕಾಡೆಮಿ ಸದಸ್ಯರಾದ ಲೋಕೇಶ್ ಊರುಬೈಲು ವಂದಿಸಿದರರು.ವಿನೋದ್ ಮೂಡಗದ್ದೆ ಕಾರ್ಯಕ್ರಮ ನಿರೂಪಿಸಿದರು.














