ಸುಳ್ಯ: ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರಯುಕ್ತ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಾನಸಿಕ ಒತ್ತಡವನ್ನು ಪರಿಹರಿಸುವ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನಡೆಯಿತು. ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗ ಮುಖ್ಯಸ್ಥ ಡಾ. ಅಶೋಕ್ ಕೆ ಕಾರ್ಯಗಾರ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ನಿರ್ದೇಶಕ ಕೆ.ವಿ.ಜಿ ಮೆಡಿಕಲ್ ಕಾಲೇಜ್ನ ಕಾರ್ಯನಿರ್ವಾಕ ನಿರ್ದೇಶಕ ಅಕ್ಷಯ್ ಕೆ. ಸಿ, ಕಾಲೇಜಿನ ತ್ರೈಮಾಸಿಕ ಪತ್ರಿಕೆಯನ್ನು“ಆಯುರ್ ನ್ಯೂಸ್” ಬಿಡುಗಡೆಗೊಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ. ಪ್ರಾಸ್ತಾವಿಕವಾಗಿ ಮಾತನಾಡಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಕೆ.ವಿ.ಜಿ ಆಯುರ್ವೇದ ಫಾರ್ಮದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪುರುಷೋತ್ತಮ ಕೆ. ಜಿ., ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸನತ್ ಕುಮಾರ್ ಡಿ. ಜಿ., ಉಪಸ್ಥಿತರಿದ್ದರು.ಈ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಎನ್.ಎಸ್.ಎಸ್., ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಡಾ. ಪುರುಷೋತ್ತಮ ಕೆ. ಜಿ, ಸ್ವಾಗತಿಸಿದರು. ಡಾ. ಸನತ್ ಕುಮಾರ್ ಡಿ. ಜಿ. ವಂದಿಸಿದರು. ಡಾ. ಫಾತಿಮಾತ್ ಪಾಯಿಮ ಈ ಕಾರ್ಯಕ್ರಮ ನಿರೂಪಿಸಿದರು.