ಬಾಳಿಲ:ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ. 26ರಿಂದ ಆರಂಭಗೊಂಡಿದ್ದು ಜ. 29ರ ವರೆಗೆ ವಿಜೃಂಭಣೆಯಿಂದ ಜರಗಲಿದೆ.ಜ. 27ಎಂದು ಬೆಳಿಗ್ಗೆ ಗಣಪತಿ ಹವನ ಸಹಿತ ಚಂಡಿಕಾ ಹವನ ಮತ್ತು ದುರ್ಗಾ ಪೂಜೆ, ಶ್ರೀ ದೈವಗಳಿಗೆ ವಿಶೇಷ ತಂಬಿಲ ಸೇವೆ, ಸಾಮೂಹಿಕ ಪ್ರಾರ್ಥನೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಸಂಜೆ ಕುಕ್ಕುತ್ತಡಿಯ ಶ್ರೀ ದೈವಗಳ

ಬಚ್ಚೆಲ್ಕಟ್ಟೆಯಲ್ಲಿ ತಂಬಿಲ ಸೇವೆ ನಡೆಯಿತು
ಸಂಜೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಕೋಟೆಮುಂಡುಗಾರು, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಕಳಂಜ, ಬ್ರಾಹ್ಮರಿ ಮಹಿಳಾ ಭಜನಾ ಮಂಡಳಿ ತಂಟೆಪ್ಪಾಡಿ ಇವರಿಂದ ಮೂರುಕಲ್ಲಡ್ಕದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು
ರಾತ್ರಿ ಶ್ರೀ ಉಳ್ಳಾಕುಲು ದೈವಕ್ಕೆ ಎಣ್ಣೆಬೂಳ್ಯ ನೀಡುವ ಕಾರ್ಯಕ್ರಮ ನಡೆಯಿತು.
ಮೂರು ಕಲ್ಲಡ್ಕದಲ್ಲಿ ದೈವಸ್ಥಾನವನ್ನು ಅಲಂಕಾರಗೊಳಿಸಲಾಗಿದ್ದು ಪುಷ್ಪಾಲಂಕಾರದಿಂದ ಕಂಗೊಳಿಸುತಿದೆ. ಇಷ್ಟದೇವತಾ ಉಳ್ಳಾಕುಲು ಸನ್ನಿಧಿ, ವಿದ್ಯುತ್ ದೀಪಗಳ ಅಲಂಕಾರ ಪ್ರಭೆಯಲ್ಲಿ ಮತ್ತು ಪುಷ್ಪಾಲಂಕಾರದಲ್ಲಿ ಕಂಗೊಳಿಸುತಿದೆ.

ಜ.28ರಂದು ಬೆಳಿಗ್ಗೆ 5:30ಕ್ಕೆ ಮೂರುಕಲ್ಲಡ್ಕ ದೈವಸ್ಥಾನದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಟು ಮೂರುಕಲ್ಲಡ್ಕದಲ್ಲಿ ಏಕತ್ರಗೊಂಡು ಕಲ್ಲಮಾಡಕ್ಕೆ ತೆರಳಲಿದೆ. ಬೆಳಿಗ್ಗೆ 7.00ರಿಂದ ಅಯ್ಯನಕಟ್ಟೆ ಕಲ್ಲಮಾಡದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವದ ಸಿರಿಮುಡಿ ಏರಿ ಕಾಲಾವಧಿ ನೇಮವು ನಡೆಯಲಿದ್ದು ಬಳಿಕ ಬಟ್ಟಲು ಕಾಣಿಕೆ, ಸಿರಿಮುಡಿ ಗಂಧ ಪ್ರಸಾದ ವಿತರಣೆಯಾಗಿ ತದನಂತರ,
ಕೊಡಮಣಿತ್ತಾಯ, ಕೊಲ್ಲಿಕುಮಾರ, ಪುರುಷ ದೈವ, ಮೈಸಂದಾಯ
ದೈವಗಳ ಕಟ್ಟುಕಟ್ಟಳೆಯ ನೇಮ, ಬೂಳ್ಯ ವಿತರಣೆ ನಡೆಯಲಿದೆ. ಪೂ.
11:30 ರಿಂದ ರುದ್ರಚಾಮುಂಡಿ ದೈವದ ನರ್ತನ ಸೇವೆ, ಬೂಳ್ಯ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 6.00ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಅಧ್ಯಕ್ಷ ಚೆನ್ನಪ್ಪ ಗೌಡ ಕಜೆಮೂಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ವಿಶ್ರಾಂತ ಅಧ್ಯಾಪಕರಾದ ಸದಾಶಿವ ಭಟ್ ಜೋಗಿಬೆಟ್ಟು ಭಾಗವಹಿಸಲಿದ್ದಾರೆ.ಸಂಸದ ನಳಿನ್ ಕುಮಾರ್ ಕಟೀಲು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಪಾವನ ಜೋಗಿಬೆಟ್ಟು,ಕಳಂಜ ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಬೇರಿಕೆ, ಕಳಂಜ ಬಾಳಿಲ ಪ್ರಾ.ಕೃ.ಪ. ಸ.ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ಭಾಗವಹಿಸಲಿದ್ದಾರೆ.
ಸಂಜೆ 7.00ರಿಂದ ಪ್ರಸಿದ್ದ ಕಲಾವಿದರ ಕೊಡುವಿಕೆಯಲ್ಲಿ ಯಕ್ಷಗಾನ ಬಯಲಾಟ ‘ಮರ್ಯಾದಾ ಪುರುಷೋತ್ತಮ’ ನಡೆಯಲಿದೆ. ರಾತ್ರಿ 9:00
ರಿಂದ ಅನ್ನಸಂತರ್ಪಣೆ ನಡೆಯಲಿದೆ.









