ಬನಾರಿ:ದೇಲಂಪಾಡಿ ಬನಾರಿಯ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ 81ನೆಯ ವಾರ್ಷಿಕೋತ್ಸವ, ಕೀರಿಕ್ಕಾಡು ಸಂಸ್ಮರಣೆ ಹಾಗೂ ಡಾ.ಎಂ.ಮೋಹನ ಆಳ್ವರಿಗೆ ಕೀರಿಕ್ಕಾಡು ಪ್ರಶಸ್ತಿ ಪ್ರದಾನ ಸಮಾರಂಭ ಇಂದು(ಅ.25ರಂದು) ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಸಭಾಭವನದಲ್ಲಿ ನಡೆಯಲಿದೆ. ಅಪರಾಹ್ನ 2.15ರಿಂದ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ
ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡುವರು.ಮುಂಬೈ ವಿಶ್ವ ವಿದ್ಯಾನಿಲಯದ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ.ತಾಳ್ತಜೆ ವಸಂತಕುಮಾರ ಅಧ್ಯಕ್ಷತೆ ವಹಿಸುವರು.ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವ ಅವರು ಕೀರಿಕ್ಕಾಡು ಪ್ರಶಸ್ತಿ ಸ್ವೀಕರಿಸುವವರು.ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ.ಮೋಹನ ಕುಂಟಾರ್ ಅಭಿನಂದನಾ ಭಾಷಣ ಮಾಡುವರು.ಉದಯವಾಣಿಯ
ನಿವೃತ್ತ ಹಿರಿಯ ಉಪಸಂಪಾದಕರಾದ ಎಸ್. ನಿತ್ಯಾನಂದ ಪಡ್ರೆ ಕೀರಿಕ್ಕಾಡು ವಿಷ್ಣು ಭಟ್ ಸಂಸ್ಮರಣೆ ಮಾಡುವರು. ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ತೊಟ್ಟೆತ್ತೋಡಿ, ಊಜಂಪಾಡಿ ಮಣಿಯೂರು ಶ್ರೀ ಶಾಸ್ತಾರ ದೇವಸ್ಥಾನದ ಮೊಕ್ತೇಸರರಾದ ನಾರಾಯಣ ನಾಯ್ಕ್ ಊಜಂಪಾಡಿ ಶುಭಾಶಂಸನೆ ಮಾಡುವರು.

ಕನ್ನಡಿಯಲ್ಲಿ ಕನ್ನಡಿಗ ಕೃತಿ ಬಿಡುಗಡೆ:
ಪೂ.11.30ರಿಂದ ಡಾ.ಪ್ರಮೀಳಾ ಮಾಧವ್ ಸಂಪಾದಿಸಿದ ‘ಕನ್ನಡಿಯಲ್ಲಿ ಕನ್ನಡಿಗ’ ಕೃತಿ ಸರಣಿಯ ಐದನೇ ಸಂಚಿಕೆಯ ಬಿಡುಗಡೆ ಸಮಾರಂಭ ನಡೆಯಲಿದೆ.ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಅಧ್ಯಕ್ಷ ಡಾ.ರಮಾನಂದ ಬನಾರಿ ಮಂಜೇಶ್ವರ ಅಧ್ಯಕ್ಷತೆ ವಹಿಸುವರು.ಹಿರಿಯ ವಿದ್ವಾಂಸರಾದ ಪ್ರೊ.ವಿ.ಬಿ. ಅರ್ತಿಕಜೆ ಕೃತಿ ಬಿಡುಗಡೆ ಮಾಡುವವರು. ಡಾ.ಪ್ರಮೀಳಾ ಮಾಧವ್ ಕೃತಿಯ ಬಗ್ಗೆ ಮಾತನಾಡುವರು.
ಕಲಾ ಸಾಂಸ್ಕೃತಿಕ ಕಾರ್ಯಕ್ರಮಗಳು:
ವಾರ್ಷಿಕೋತ್ಸವದ ಅಂಗವಾಗಿ ಅ.25ರಂದು ದಿನಪೂರ್ತಿ ವಿವಿಧ ಕಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಘದ ಸದಸ್ಯರು ಮತ್ತು ಸ್ಥಳೀಯ ಪ್ರತಿಭೆಗಳಿಂದ ಶ್ರೀಮದ್ಭಗವದ್ಗೀತಾ ಪಾರಾಯಣ, ಕುಣಿತ ಭಜನೆ, ಯಕ್ಷಗಾನಾರ್ಚನೆ, ನೃತ್ಯಾರ್ಚನೆ ನಡೆಯಲಿದೆ.
ಜೆ 4.30 ರಿಂದ ಸಂಘದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ – ‘ಶ್ರೀಕೃಷ್ಣಾನುಗ್ರಹ’ ರಾತ್ರಿ
7ರಿಂದ ಸಂಘದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ ‘ರತಿ ಕಲ್ಯಾಣ’ ನಡೆಯಲಿದೆ. ರಾತ್ರಿ ಗಂಟೆ 9ಕ್ಕೆ ಭೋಜನ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಡಾ. ರಮಾನಂದ ಬನಾರಿ ಮಂಜೇಶ್ವರ ಹಾಗೂ ಕಾರ್ಯದರ್ಶಿ ವಿಶ್ವವಿನೋದ ಬನಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














