The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಕಲೆಯ ಕಲಾರವ ಸರ್ವ ವ್ಯಾಪಿಯಾಗಲಿ: ಎಡನೀರುಶ್ರೀ: ಬನಾರಿಯಲ್ಲಿ ವಿಶ್ವ ವಿನೋದ ಯಕ್ಷ ಕಲಾರವ

by ದಿ ಸುಳ್ಯ ಮಿರರ್ ಸುದ್ದಿಜಾಲ November 13, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 13, 2022
Share this article

ಬನಾರಿ:ಕಲೆಯ ಕಲಾರವ ಸರ್ವ ವ್ಯಾಪಿಯಾಗಿ ಎಲ್ಲೆಡೆ ಪಸತಿಸಿ ಎಲ್ಲರಿಗೂ ಸಿಗಲಿ ಎಂದು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಬನಾರಿ ಶ್ರೀ ಗೋಪಾಲಕೃಷ್ಣ ಕಲಾ ಸಂಘದ ಕೀರಿಕ್ಕಾಡು ಮಾಸ್ತರ್ ಸ್ಮಾರಕ ಸಭಾಭವನದಲ್ಲಿ ವಿಶ್ವವಿನೋದ 75 ಯಕ್ಷಕಲಾರವ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಸುಪುತ್ರ ವಿಶ್ವವಿನೋದ ಬನಾರಿಯವರು ಭಾಗವತರಾಗಿ ಕವಿಯಾಗಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಗುರುತಿಸಿಕೊಂಡವರು. ಸುಂದರವಾದ ಪರಿಸರದಲ್ಲಿ ಸುಂದರವಾದ ಕಲಾಮಂದಿರವನ್ನು ಕಟ್ಟಿ ಇಲ್ಲಿ ನಿರಂತರವಾಗಿ ಯಕ್ಷಗಾನ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿರುವುದು ಅವರ ಯಕ್ಷಗಾನದ ಶಕ್ತಿ ಮತ್ತು ಪ್ರೀತಿಯನ್ನು ತೋರಿಸುತ್ತದೆ. ಮುಂದೆಯೂ ಈ ಕ್ಷೇತ್ರಕ್ಕೆ ಅವರ ಸೇವೆ ಇರಲಿ ಎಂದು ಆಶಿಸುತ್ತೇನೆ ಎಂದು ಅವರು ಹೇಳಿದರು.ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಮಾತನಾಡಿ ಯಕ್ಷಗಾನದಲ್ಲಿ ಪ್ರತ್ಯುತ್ಪನ್ನಮತಿತ್ವ ಇದೆ. ಕಾವ್ಯ ಪುರಾಣ ಜ್ಞಾನ ಇರಬೇಕು. ವಿಭಿನ್ನ ಪರಿಸರದಿಂದ ವಿಭಿನ್ನ ವ್ಯಕ್ತಿತ್ವ ನಿರ್ಮಾಣಗೊಳ್ಳುತ್ತದೆ. ಜಾತಿ, ಮತ, ಪ್ರಾಯ ಹೀಗೆ ಯಾವುದೇ ಭೇದಭಾವ ಎಣಿಸದೆ ಯಕ್ಷಗಾನ ಕಲಿಸಿಕೊಡುವುದು ಕೀರಿಕ್ಕಾಡು ಮಾಸ್ತರ್ ಅವರ ಗುರುಕುಲದಲ್ಲಿ ಮಾತ್ರವೇ ಸಾಧ್ಯವಿತ್ತು. ಅದೇ ಗುರುಕುಲ ಮಾದರಿಯಲ್ಲಿ ವಿಶ್ವವಿನೋದ ಬನಾರಿಯವರು ಯಕ್ಷಗಾನ ಭಾಗವತಿಕೆಯನ್ನು ತಮ್ಮ ಶಿಷ್ಯಂದಿರಿಗೆ ಕಲಿಸುತ್ತಿದ್ದಾರೆ. ಮುಂದೆಯೂ ಅವರಿಂದ ಇನ್ನಷ್ಟು ಶಿಷ್ಯರು ಬೆಳಕಿಗೆ ಬರಲಿ ಎಂದು ಅವರು ಶುಭ ಹಾರೈಸಿದರು. ಡಾ. ಸುಧಾಕರ ಭಟ್ ಸುಳ್ಯ ಉಪಸ್ಥಿತರಿದ್ದರು.
ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಧ್ಯಕ್ಷರು, ಹಿರಿಯ ವೈದ್ಯ ಸಾಹಿತಿ ಡಾ. ರಮಾನಂದ ಬನಾರಿ ಸ್ವಾಗತಿಸಿದರು. ರಮಾನಂದ ರೈ ದೇಲಂಪಾಡಿ ವಂದಿಸಿದರು. ಅಪರ್ಣಾ ರಾವ್ ಕುತ್ಯಾಡಿ, ಜಲಜಾಕ್ಷಿ ರೈ ಬೆಳ್ಳಿಪ್ಪಾಡಿ ಮತ್ತು ವಿಕೇಶ್ ರೈ ಶೇಣಿ ಅವರು ಕಾರ್ಯಕ್ರಮ ನಿರೂಪಿಸಿದರು.

ವಿಶ್ವಯಕ್ಷಗಾಯನಾಭಿವಂದನೆ:
ಕಾರ್ಯಕ್ರಮದ ಅಂಗವಾಗಿ ವಿಶ್ವವಿನೋದ ಬನಾರಿಯವರ ಶಿಷ್ಯವೃಂದದವರಿಂದ ‘ವಿಶ್ವಯಕ್ಷಗಾಯನಾಭಿವಂದನೆ’ ಕಾರ್ಯಕ್ರಮವು ಜರಗಿತು. ಗಣಪತಿ ಹವನ ಮತ್ತು ಶ್ರೀ ಗೋಪಾಲಕೃಷ್ಣ ದೇವರ ಪೂಜಾರ್ಚನೆಯೊಂದಿಗೆ ಆರಂಭಗೊಂಡ ಈ ಗಾನಾರ್ಚನೆಯಲ್ಲಿ ಸಾಯಿ ನಕ್ಷತ್ರ, ಪಾವನಾ ನೀರ್ಪಾಜೆ, ಅಭಿಜ್ಞಾ ಭಟ್ ನಾಟಿಕೇರಿ, ನಿತೀಶ್ ಕುಮಾರ್ ಎಂಕಣ್ಣಮೂಲೆ, ಶಶಿಧರ ತೆಕ್ಕೇಕರೆ, ನಾರಾಯಣ ತೋರಣಗಂಡಿ, ಚಂದ್ರಶೇಖರ ಉಬರಡ್ಕ, ಮನೋಹರ ಕಾಮತ್ ಕಾವು, ಮೋಹನ ಮೆಣಸಿನಕಾನ, ದಯಾನಂದ ಬಂದ್ಯಡ್ಕ, ವಿದ್ಯಾಭೂಷಣ ಪಂಜಾಜೆ, ದಯಾನಂದ ಪಾಟಾಳಿ ಮಯ್ಯಾಳ ಅವರು ಭಾಗವತರಾಗಿ ತಮ್ಮ ಕಲಾ ಪ್ರತಿಭೆಯನ್ನು ತೋರ್ಪಡಿಸಿದರು. ಚೆಂಡೆ ಮದ್ದಳೆ ವಾದನದಲ್ಲಿ ಕುಮಾರ ಸುಬ್ರಹ್ಮಣ್ಯ ವಳಕುಂಜ, ವಿಷ್ಣುಶರಣ ಬನಾರಿ, ಸಹಕರಿಸಿದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಬಿಎಂಎಸ್ ಕುಟುಂಬ ಮಿಲನ ಕಾರ್ಯಕ್ತಮ
next post
ಹಿರಿಯ ಸಹಕಾರಿ ನಿತ್ಯಾನಂದ ಮುಂಡೋಡಿ ಅವರಿಗೆ ‘ಸಹಕಾರ ರತ್ನ’ ಪ್ರಶಸ್ತಿ

You may also like

ಅಶ್ವಿಜ್ ಅತ್ರೇಯನಿಗೆ ರಿಯಾಲಿಟಿ ಶೋದಲ್ಲಿ ಪ್ರಶಸ್ತಿ

June 7, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

ಡೆಂಗ್ಯೂ, ಮಲೇರಿಯಾ ಬಗ್ಗೆ ಮುನ್ನೆಚ್ಚರಿಕೆ ಇರಲಿ: ಡಾ. ಕುಮಾರ್

June 6, 2023

ನೈತಿಕ ಪೊಲೀಸ್​ಗಿರಿ ತಡೆಗೆ ‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ: ಗೃಹ...

June 6, 2023

ಸಂಪಾಜೆ ಗ್ರಾಮದ ಮೂಲಭೂತ ಅಭಿವೃದ್ಧಿಗಾಗಿ ಹೋರಾಟ: ಸಂಪಾಜೆ ಮೂಲಭೂತ ಸೌಕರ್ಯಗಳ...

June 6, 2023

ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಉಚಿತ ವಿದ್ಯುತ್: ಸಿಎಂ ಸಿದ್ದರಾಮಯ್ಯ

June 6, 2023

200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಮಾರ್ಗಸೂಚಿ...

June 5, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ನಗರ ಸ್ವಚ್ಛತಾ ಅಭಿಯಾನ: ಆಲೆಟ್ಟಿ ರಸ್ತೆಯಲ್ಲಿ 37ನೇ ವಾರದ ಸ್ವಚ್ಛತಾ ಕಾರ್ಯಕ್ರಮ
  • ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
  • ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೆಶ್ವರ್ ಅವರಿಗೆ ಸನ್ಮಾನ
  • ಹನಿ‌ ಸುರಿಸಿ ಮಾಯವಾದ ವರುಣ: ಮುಂದುವರಿದ ಮಳೆಯ ಕಣ್ಣಾ ಮುಚ್ಚಾಲೆ
  • ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ಭಾರತ ವಿರುದ್ಧ ಬೃಹತ್ ಮೊತ್ತದತ್ತ ಆಸ್ಟ್ರೇಲಿಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ