ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಳ್ಳಾರೆಯ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ
ಮನವಿ ಸಲ್ಲಿಸಿದ್ದಾರೆ. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿ ಇಲ್ಲದಿರುವ ಕಾರಣ ಗ್ರಾಮೀಣ ಜನರಿಗೆ ಆರೋಗ್ಯದ ಸೇವೆ ಪಡೆಯಲು ತುಂಬಾ ಕಷ್ಟವಾಗುತ್ತಿದೆ. ಆದುದರಿಂದ ಕೂಡಲೇ ವೈದ್ಯರ ನೇಮಕ ಮಾಡಬೇಕು ಮತ್ತು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಯಂತ್ರಗಳಿದ್ದು ಈ ಚಿಕಿತ್ಸೆ ನೀಡಲು ಡಯಾಲಿಸಿಸ್ ಟೆಕ್ನಿಷಿಯನ್ ಒದಗಿಸಿ ಕೊಡಬೇಕೆಂದು ಮನವಿ ಸಲ್ಲಿಸಿದರು.