ಬೆಳ್ಳಾರೆ: ಬೆಳ್ಳಾರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಭರ್ಜರಿ ಗೆಲುವು ದಾಖಲಿಸಿದೆ. 12 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ ಬೆಂಬಲಿತ ಒಬ್ಬರು ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ
ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಪದ್ಮನಾಭ ಶೆಟ್ಟಿ ಪೆರುವಾಜೆ, ರಾಮಕೃಷ್ಣ ಭಟ್(ಆರ್.ಕೆ.ಭಟ್ ಕುರುಂಬುಡೇಲು), ಜನಾರ್ಧನ ಗೌಡ, ಭಾಸ್ಕರ ಗೌಡ, ನಾರಾಯಣ ಕೊಂಡೆಪಾಡಿ ಗೆಲುವು ಸಾಧಿಸಿದರು. ಸಾಮಾನ್ಯ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕರುಣಾಕರ ಆಳ್ವ ಗೆಲುವು ಸಾಧಿಸಿದ್ದಾರೆ.
ಹಿಂದುಳಿದ ವರ್ಗ ಎ ಮೀಸಲು ಸ್ಥಾನದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ವಾಸುದೇವ ನಾಯಕ್, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಿಂದ ಬಿಜೆಪಿಯ ಐತ್ತಪ್ಪ ರೈ ಅಜ್ರಂಗಳ ಜಯ ಗಳಿಸಿದ್ದರೆ. ಮಹಿಳಾ ಮೀಸಲು ಸ್ಥಾನದಿಂದ ಸಹಕಾರ ಭಾರತಿಯ ಭಾರತಿ ಕೊಚ್ಚಿ ಹಾಗೂ ವನಿತಾ ಸಾರಕೆರೆ ಗೆಲುವು ಸಾಧಿಸಿದರು. ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಬಿಯಾಳು, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಸುಂದರ ನಾಯ್ಕ ನಾಗನಮಜಲು ಜಯ ಗಳಿಸಿದರು.