ಸುಳ್ಯ:ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭಾನುವಾರವೂ ಬಿರುಸಿನ ಚುನಾವಣಾ ಪ್ರಚಾರ ನಟೆಸಿದರು. ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ನಡೆಸಿ ಪ್ರಚಾರ ಆರಂಭಿಸಿದರು.
ಕಾಣಿಯೂರು ಶ್ರೀ ಅಮ್ಮನವರ ದೈವಸ್ಥಾನಕ್ಕೆ ಶ್ರೀ ಮಾರಿಯಮ್ಮ ದೈವಸ್ಥಾನಕ್ಕೆ ಭೇಟಿ ನೀಡಿದರು.ಬೊಬ್ಬೆಕೇರಿ-ಕಾಣಿಯೂರು ಬೂತ್ ನಲ್ಲಿ
ಗ್ರಾಮಸ್ಥರ ಮತ್ತು ಕಾರ್ಯಕರ್ತರ ಸಭೆಯನ್ನು ನಡೆಸಿ ಮತ ಯಾಚಿಸಲಾಯಿತು. ಸವಣೂರು ಮಹಾಶಕ್ತಿ ಕೇಂದ್ರದಲ್ಲಿ ಮನೆ ಭೇಟಿ ನಡೆಸಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.
ಬೆಳಂದೂರು ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಯಿತು.
ಸವಣೂರು, ಕುದ್ಮಾರು, ದೋಳ್ಪಾಡಿ ಬೂತ್ಗಳಲ್ಲಿ ಕಾರ್ಯಕರ್ತರೊಂದಿಗೆ ಮಾತುಕತೆ, ಸಭೆ, ಚುನಾವಣಾ ಪ್ರಚಾರ ನಡೆಸಿ ಮತ ಯಾಚನೆ ನಡೆಸಲಾಯಿತು. ಸಂದರ್ಭದಲ್ಲಿ ಹಿರಿಯರು, ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಂಡಲ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಪದಾಧಿಕಾರಿಗಳು ಮೋರ್ಚಾಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ಮುಖಂಡರು, ಸಾಮಾಜಿಕ ಜಾಲತಾಣ ಪ್ರಮುಖರು, ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.