ಸುಳ್ಯ:ಸುಳ್ಯ ಬಿಜೆಪಿ ಮಂಡಲ ಸಮಿತಿ ವಿವಿಧ ಶಕ್ತಿ ಕೇಂದ್ರಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ಮಾಡಲಾಗಿದೆ. ಸುಳ್ಯ ನಗರ ಮಹಾ ಶಕ್ತಿಕೇಂದ್ರದ
ಅಧ್ಯಕ್ಷರಾಗಿ ಕುಸುಮಾಧರ ಎ.ಟಿ. ಪ್ರಧಾನ ಕಾರ್ಯದರ್ಶಿಯಾಗಿ
ನಾರಾಯಣ ಶಾಂತಿನಗರ ಆಯ್ಕೆಯಾಗಿದ್ದಾರೆ. ಕುಸುಮಾಧರ ಎ.ಟಿ. ಈ ಹಿಂದೆ ಎಬಿವಿಪಿ ಜಿಲ್ಲಾ ಪ್ರಮುಖರಾಗಿ, ಎರಡು ವರ್ಷ
ನಾರಾಯಣ ಶಾಂತಿನಗರ
ಎಬಿವಿಪಿ ಪೂರ್ಣಾವಧಿ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದ.ಕ.ಜಿಲ್ಲಾ ಕಾಲೇಜ್ ವಿದ್ಯಾರ್ಥಿ ಪ್ರಮುಖರಾಗಿ, ಸಂಸ್ಕಾರ ಭಾರತಿ ದ.ಕ.ಜಿಲ್ಲಾ ಕಾರ್ಯದರ್ಶಿಯಾಗಿದ್ದರು. ಸುಳ್ಯ ಸಿಎ ಬ್ಯಾಂಕ್ ಉಪಾಧ್ಯಕ್ಷರಾಗಿದ್ದರು. ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯರಾಗಿರುವ ಅವರು ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕಾಯರ್ತೋಡಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಯುವಕ ಮಂಡಲವನ್ನು ಯುವಜನ ಮೇಳದಲ್ಲಿ ರಾಜ್ಯಮಟ್ಟಕ್ಕೆ ಕೊಂಡೊಯ್ದರು. ಡೊಳ್ಳುಕುಣಿತ, ವೀರಗಾಸೆಯಲ್ಲಿ ರಾಜ್ಯಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಿ ಬಹುಮಾನ ಗಳಿಸಿತ್ತು.ಬಿಜೆಪಿ
ಸುಳ್ಯ ನಗರ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ನಾರಾಯಣ ಶಾಂತಿನಗರ ಅವರು ಬಿಎಂಎಸ್ ಸಂಯೋಜಿತ ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ನಗರ ಪ್ರಮುಖ್ ಆಗಿ ಬಿಜೆಪಿ ಶಾಂತಿನಗರ ಬೂತ್ ಸಮಿತಿ ಅಧ್ಯಕ್ಷರಾಗಿದ್ದರು. ಪರಿವಾರ ಸಂಘಟನೆಗಳಲ್ಲಿ ಸಕ್ರೀಯರಾಗಿರುವ ನಾರಾಯಣ ಶಾಂತಿನಗರ ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರೀಯರಾಗಿದ್ದಾರೆ.
ಬಿಜೆಪಿ ಕಾರ್ಯಲಯ ಕಾರ್ಯದರ್ಶಿಯಾಗಿಯೂ
ಕುಸುಮಾಧರ ಎ.ಟಿ ನೇಮಕಗೊಂಡಿದ್ದಾರೆ.
ಕಾರ್ಯಾಲಯ ಸಹ ಕಾರ್ಯದರ್ಶಿ ಚಂದ್ರಶೇಖರ ನಡಿಲು ನೇಮಕವಾಗಿದ್ದಾರೆ. ನಗರ