ಸುಳ್ಯ: ಜೀರ್ಣೋದ್ಧಾರಗೊಂಡು ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ನಡೆದ ಸುಳ್ಯದ ಬೂಡು ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದಲ್ಲಿ ನೇಮೋತ್ಸವ ನಡೆಯಿತು. ಮಾ.18ರಂದು ರಾತ್ರಿ ಕುಪ್ಪೆ ಪಂಜುರ್ಲಿ ಮತ್ತು
ಗುಳಿಗ ದೈವದ ನೇಮೋತ್ಸವ ನಡೆಯಿತು. ನೂರಾರು ಭಕ್ತರು ಸೇರಿ ದೈವದ ನರ್ತನ ಸೇವೆ ಕಣ್ತುಂಬಿಕೊಂಡರು. ಅನ್ನ ಸಂತರ್ಪಣೆ ನಡೆಯಿತು.
ಬ್ರಹ್ಮಕಲಶೋತ್ಸವ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಕೋಶಾಧಿಕಾರಿ ಶಿವರಾಮ ಕೇರ್ಪಳ, ಆಡಳಿತ ಮೊಕ್ತೇಸರ ಮಾಯಿಲ ಬೂಡು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಬೂಡು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬೂಡು, ಕೋಶಾಧಿಕಾರಿ ಪದ್ಮಪ್ಪ ಬೂಡು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಚಿತ್ರ: ನವೀನ್, ಸ್ಟುಡಿಯೋ ಗೋಪಾಲ್