ಸುಳ್ಯ:ಸುಳ್ಯದ ಬೂಡು ಪರಿಸರದಲ್ಲಿರುವ ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಮಾ.16ರಂದು ನಡೆಯಿತು.ಬೆಳಗ್ಗೆ ವಿವಿಧ ವೈದಿಕ ಕಾರ್ಯಕ್ರಮಗಳು ನಡೆದು ಬೆಳಗ್ಗೆ 10.31ರ ವೃಷಭ ಲಗ್ನದಲ್ಲಿ
ಪ್ರತಿಷ್ಟೆ, ಕಲಶಾಭಿಷೇಕ, ನಿರ್ಣಯ, ಅಲಂಕಾರ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
ಸಂಜೆ ಧಾರ್ಮಿಕ ಸಭೆ ನಡೆಯಲಿದ್ದು ಮಾಜಿ ಸಂಸದ ನಳಿನ್ಕುಮಾರ್ ಕಟೀಲ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್ಯನ್ ಮ್ಯೂಸಿಕಲ್ಸ್ ಸುಳ್ಯ ಇವರಿಂದ ಸಂಗೀತ ರಸಮಂಜರಿ. ಬಳಿಕ ಎಕ್ಸ್ ಟೆಸಿ ಡ್ಯಾನ್ಸ್ ಕ್ರಿವ್ ಸುಳ್ಯ ಇವರಿಂದ ಡಾನ್ಸ್ ಧಮಾಕ ನಡೆಯುವುದು. ಹಾಗೂ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈಭವ ನಡೆಯುವುದು.ಮಾ.18ರಂದು ಮಂಗಳವಾರ ರಾತ್ರಿ ದೈವಗಳ ನೇಮೋತ್ಸವ ನಡೆಯಿತು.