ಸುಳ್ಯ: ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಮತ್ತು ಮನೆಯವರು ಸಮರ್ಪಣೆ ಮಾಡುವ ನೂತನ ಬ್ರಹ್ಮರಥ ಸುಳ್ಯ ತಾಲೂಕಿಗೆ ಪುರ ಪ್ರವೇಶ ಮಾಡಿತು. ಈ ಸಂದರ್ಭದಲ್ಲಿ ಬ್ರಹ್ಮರಥಕ್ಕೆ ಕನಕಮಜಲಿನಲ್ಲಿ ಭಕ್ತಿ ಸಂಭ್ರಮದ ಸ್ವಾಗತ ಕೋರಲಾಯಿತು. ಡಿ.24ರಂದು ಕೋಟೇಶ್ವರದಿಂದ ಹೊರಟು ಕನಕಮಜಲಿಗೆ ಆಗಮಿಸಿದ ರಥಕ್ಕೆ
ಕನಕಮಜಲಿನ ಶ್ರೀ ಆತ್ಮಾರಾಮ ದೇವರಿಗೆ ವಿಶೇಷ ಮಹಾ ಮಂಗಳಾರತಿ ನೆರವೇರಿಸಿ, ನೂತನ ಬ್ರಹ್ಮರಥಕ್ಕೆ ಆರತಿ ಬೆಳಗುವ ಮೂಲಕ ಬ್ರಹ್ಮರಥಕ್ಕೆ ಸ್ವಾಗತ ಕೋರಲಾಯಿತು. ಕನಕಮಜಲಿನ ಮೂಲಕ ಸುಳ್ಯ ತಾಲೂಕಿಗೆ ಬ್ರಹ್ಮರಥ ಆಗಮಿಸುವ ಹಿನ್ನೆಲೆಯಲ್ಲಿ ಶೃಂಗಾರ ನಡೆಸಿ ಅಲಂಕಾರ ಮಾಡಲಾಗಿತ್ತು. ಸುಳ್ಯದ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಮಂದಿ ಭಕ್ತಾದಿಗಳು ಆಗಮಿಸಿ ಸ್ವಾಗತ ಕೋರಿದರು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೃಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಉಪಾಧ್ಯಕ್ಷೆ ಶೊಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ., ಕಾರ್ಯದರ್ಶಿಗಳಾದ ಡಾ.ಐಶ್ವರ್ಯ, ಕೆ.ವಿ.ಹೇಮನಾಥ,ಬ್ರಹ್ಮರಥ ಸಮರ್ಪಣಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ, ಪ್ರಧಾನ ಕಾರ್ಯದರ್ಶಿ ಡಾ.ಲೀಲಾಧರ ಡಿ.ವಿ ಮತ್ತಿತರರು ಉಪಸ್ಥಿತರಿದ್ದರು. ನೂತನ ಬ್ರಹ್ಮರಥಕ್ಕೆ ಕನಕಮಜಲು

ಗ್ರಾಮ ಪಂಚಾಯತಿ ಅಧ್ಯಕ್ಷೆ ಶಾರದಾ ಉಗ್ಗಮೂಲೆ, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಗೌಡ ಬೊಮ್ಮೆಟ್ಟಿ, ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ಅಧ್ಯಕ್ಷ ವಸಂತ ಮಳಿ, ಮಂದಿರದ ಅರ್ಚಕ ಗೋಪಾಲಕೃಷ್ಣ ಭಟ್ ವಾರಂಬಳಿತ್ತಾಯ
ಅವರು ತೆಂಗಿನ ಕಾಯಿ ಒಡೆದು ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ಬಳಿಕ ಭಕ್ತಾದಿಗಳು ಸೇರಿ ಬ್ರಹ್ಮರಥಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನಕಮಜಲು ಗ್ರಾಮಸ್ಥರು ಮತ್ತು ಸುಳ್ಯ ತಾಲೂಕಿನ ಭಕ್ತಾದಿಗಳು ಉಪಸ್ಥಿತರಿದ್ದರು.