ಕಾರವಾರ: ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಮೀನುಗಾರರೊಂದಿಗೆ ಆಯೋಜಿಸಿದ ಸಂವಾದ ಕಾರ್ಯಕ್ರಮ “ಸಾಗರ ಪರಿಕ್ರಮ – (2023 ಹಂತ – 4)” ದಲ್ಲಿ ಭಾಗವಹಿಸಲು ಕರ್ನಾಟಕಕ್ಕೆ
ಆಗಮಿಸಿದ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾದ ಪರಷೋತ್ತಮ ರೂಪಾಲ ಹಾಗೂ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರಾದ ಡಾ.ಎಲ್ ಮುರುಗನ್ ರವರನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಕಾರವಾರ ಬಂದರಿನಲ್ಲಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕಾರವಾರ ಅಂಕೋಲ ಶಾಸಕರಾದ ರೂಪಾಲಿ ಎಸ್ ನಾಯ್ಕ, ದ.ಕ.ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ.ಮಂಗಳೂರು ಇದರ ಅಧ್ಯಕ್ಷರಾದ ಯಶಪಾಲ್ ಸುವರ್ಣ, ಹಾಗೂ ಕರ್ನಾಟಕ ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ ಕೆ ಫಾಹಿಮ್, ನಿರ್ದೇಶಕರಾದ ರಾಮಾಚಾರ್ಯ, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.