ಸುಳ್ಯ:ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ನೀಡಿದ “ಚೈತನ್ಯ ಶ್ರೀ- 2024” ಪ್ರಶಸ್ತಿಯನ್ನು ಡಾ.ಅನುರಾಧಾ ಕುರುಂಜಿಯವರಿಗೆ ಪ್ರದಾನ ಮಾಡಲಾಯಿತು. ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ನಡೆದ
ರಾಜ್ಯ ಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ನಟಿ ಉಮಾಶ್ರೀ ಅವರು ಅನುರಾಧಾ ಕುರುಂಜಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಇಸ್ರೋದ ಮಾಜಿ ಅಧ್ಯಕ್ಷ ಡಾ. ಕಿರಣ್ ಕುಮಾರ್, ವೈಜ್ಞಾನಿಕ ಪರಿಷತ್ ನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್, ಪರಿಷತ್ತ್ ನ ದ. ಕ ಜಿಲ್ಲಾಧ್ಯಕ್ಷ ಕಿದು ಗೋಪಾಲಕೃಷ್ಣ ಹಾಗೂ ವಿವಿಧ ಜಿಲ್ಲೆಗಳ ಅಧ್ಯಕ್ಷರುಗಳು ಮೊದಲಾದವರು ಉಪಸ್ಥಿತರಿದ್ದರು. ಪ್ರಶಸ್ತಿಯು ನಗದು, ಪದಕ, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಒಳಗೊಂಡಿದೆ.