ಸುಳ್ಯ:ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ವೈಭವದ ಜಾತ್ರೋತ್ಸವ ನಡೆಯುತಿದೆ. ಜ.10ರಂದು ಬೆಳಿಗ್ಗಿನಿಂದ ಶ್ರೀ ದೇವರ ದೊಡ್ಡ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಸಾವಿರಾರು ಮಂದಿ

ಭಕ್ತರು ದೊಡ್ಡ ದರ್ಶನ ಬಲಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಇಂದು
ರಾತ್ರಿ ಕಲ್ಕುಡ ದೈವಗಳ ಭಂಡಾರ ಬಂದ ಬಳಿಕ ಬ್ರಹ್ಮ ರಥೋತ್ಸವ ನಡೆಯಲಿದೆ. ಜ.9ರಂದು ರಾತ್ರಿ ಮಿತ್ತೂರು ದೈವಗಳ ಭಂಡಾರ ಬಂದ ಬಳಿಕ ಕಾನತ್ತಿಲ ದೈವಗಳ ಭಂಡಾರ ಆಗಮಿಸಿದ ವಾಲಸಿರಿ ಉತ್ಸವ ನಡೆಯಿತು.













