ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕವು ಹಮ್ಮಿಕೊಂಡಿರುವ “ಚಿಣ್ಣರೊಂದಿಗೆ ಚಿಲಿಪಿಲಿ ಗಾನ – ಕತಾ -ಯಾನ” ಸರಣಿ ಕಾರ್ಯಕ್ರಮದ ಐದನೇ ಕಾರ್ಯಕ್ರಮವು ಕಾಂತಮಂಗಲದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾವನಾ ಸಂಗೀತ ಶಾಲೆಯ ಸಂಚಾಲಕರಾದ ಶ್ರೀ ಕೆ.ಆರ್. ಗೋಪಾಲಕೃಷ್ಣ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ ಭಾಗವಹಿಸಿದ್ದರು.
ಶಾಲಾ ಶಿಕ್ಷಕಿ ಆಶಾ ಕೃಷ್ಣಾನಂದ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯೋಪಾಧ್ಯಾಯಿನಿ ಸ್ವರ್ಣಲತಾ ವಂದಿಸಿದರು. ಶಿಕ್ಷಕಿ ಮೋಹಿನಿ ಕೆಜಿ, ಗೌರವ ಶಿಕ್ಷಕಿ ಪ್ರೇಮಲತಾ ಹಾಗೂ ಅತಿಥಿ ಶಿಕ್ಷಕಿ ಸವಿತಾ ಇವರುಗಳು ಸಹಕರಿಸಿದರು. ಸುಮಾರು ಒಂದೂವರೆ ಗಂಟೆಯ ಕಾಲ ನಡೆಸಿದ ಕಾರ್ಯಕ್ರಮದಲ್ಲಿ ಶಾಲಾಮಕ್ಕಳಿಗಾಗಿ ಹಾಡುಗಳನ್ನು ಹಾಡಿ, ಕತೆಯನ್ನು ಹೇಳಲಾಯಿತು.
ಕಸಾಪ ಸುಳ್ಯ ಹೋಬಳಿ ಘಟಕವು ತನ್ನ ಹೋಬಳಿ ವ್ಯಾಪ್ತಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಈ ಕಾರ್ಯಕ್ರಮವನ್ನು ಯೋಜಿಸಿದ್ದು ಪ್ರತೀ ಶನಿವಾರ ಆಯ್ದ ಶಾಲೆಯಲ್ಲಿ ಕಾರ್ಯಕ್ರಮ ನೀಡುತ್ತಾ ಬರುತ್ತಿದೆ.














