ಸುಳ್ಯ:ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘ, ಮಂಗಳೂರು ವಿಭಾಗ, ದಕ್ಷಿಣ ಕನ್ನಡ ಜಿಲ್ಲೆ ಇವರ ವನ್ಯಜೀವಿ ಸಪ್ತಾಹ -2024 ರ ಪ್ರಯುಕ್ತ ನಡೆಸಿದ ಜಿಲ್ಲಾಮಟ್ಟದ ಚಿತ್ರಕಲೆ ಸ್ಪರ್ಧೆ – ವನ್ಯ ಚಿತ್ತಾರ ಕಿರಿಯ ವಿಭಾಗದಲ್ಲಿ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ಎರಡನೇ ತರಗತಿಯ
ವಿದ್ಯಾರ್ಥಿನಿ ತ್ರಯಾಕ್ಷ ಭಾಗವಹಿಸಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ.
ಇವರು ಅಂಬೆಟಡ್ಕದ ನೇಮಿಚಂದ್ರ ಮತ್ತು ದಿವ್ಯ ನೇಮಿಚಂದ್ರ ಇವರ ಪುತ್ರಿ.ಇವರಿಗೆ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ, ಮತ್ತು ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಪ್ರಶಸ್ತಿ ಪತ್ರ ಮತ್ತು ಸ್ಮರಣೀಯನಿತ್ತು ಗೌರವಿಸಿದರು.ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರವೃಂದದವರು ಅಭಿನಂದಿಸಿದರು.