ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ನಾಳೆ(ಜ.13) ಕಡಬದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.
ಕಡಬ ತಾಲೂಕು ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ 12ರಿಂದ 1.30 ಗಂಟೆಯವರೆಗೆ ಸಂಸದ ಕ್ಯಾ. ಚೌಟ ಅವರು ಸಾರ್ವಜನಿಕರ ಭೇಟಿಗೆ
ಲಭ್ಯವಿದ್ದು, ಕಡಬ ತಾಲೂಕಿನ ನಾಗರಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ. ಈ ಹಿಂದೆ 2ಗಂಟೆಯಿಂದ 3.30ರ ತನಕ ಎಂದು ಸಮಯ ನಿಗದಿ ಪಡಿಸಲಾಗಿತ್ತು. ಸಮಯದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.