ಸುಳ್ಯ: ಸುಳ್ಯ ಕೊಡಿಯಾಲಬೈಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೂರು ಜನ ಉಪನ್ಯಾಸಕರುಗಳು ವರ್ಗಾವಣೆಗೊಂಡಿದ್ದಾರೆ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ಡಿ ಹಾಗೂ ಗಣಿತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾಗಿ
![](https://thesulliamirror.com/wp-content/uploads/2023/08/IMG-20230817-WA0005-1.jpg)
![](https://thesulliamirror.com/wp-content/uploads/2023/08/IMG-20230817-WA0003.jpg)
![](https://thesulliamirror.com/wp-content/uploads/2023/08/IMG-20230817-WA0006-1024x907.jpg)
ಕರ್ತವ್ಯ ನಿರ್ವಹಿಸುತ್ತಿದ್ದ ಗಾಯತ್ರಿ ಪಿ ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಪುತ್ತೂರು ತಾಲೂಕು ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ ರಾಶಿ ಎಂ ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹುಣಸೂರು ಇಲ್ಲಿಗೆ ವರ್ಗಾವಣೆಗೊಂಡಿರುತ್ತಾರೆ. ವರ್ಗಾವಣೆಗೊಂಡ ಉಪನ್ಯಾಸಕರಿಗೆ ಬೀಳ್ಕೊಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕೊಯಿಂಗಾಜೆ, ಉಪನ್ಯಾಸಕರುಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.