ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಲುವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಿತು.ಕಾಂಗ್ರೆಸ್
ಮುಖಂಡರಾದ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ.ರಾಜ್ಯ ನಾಯಕರಾದ ಜಿ.ಪರಮೇಶ್ವರ್, ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಹಿರಿಯ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಹಲವು ಕ್ಷೇತ್ರಗಳಿಗೆ ಎರಡು–ಮೂರು ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದು, ಇಂದು ಅಭ್ಯರ್ಥಿ ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಒಂದೆರಡು ದಿನದಲ್ಲಿ ನೂರಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡುವ ಸಾಧ್ಯತೆ ಇದೆ