ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, 57 ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ.ದಕ್ಷಿಣ ಕನ್ನಡಕ್ಕೆ ಪದ್ಮರಾಜ್ ಆರ್, ಉಡುಪಿ – ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ, ಮೈಸೂರು – ಕೊಡಗಿಗೆ ಎಂ.ಲಕ್ಷ್ಮಣ್ ಹಾಗೂ ಕಲಬುರಗಿಯಲ್ಲಿ ರಾಧಾ ಕೃಷ್ಣ ದೊಡ್ಮನಿ ಸೇರಿದಂತೆ ರಾಜ್ಯದ 17 ಮಂದಿಗೆ ಟಿಕೆಟ್ ಘೋಷಿಸಿದೆ. ಲೋಕಸಭಾ ಚುನಾವಣೆ ಸಂಬಂಧ ಎಐಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ
ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಯಲ್ಲಿ ರಾಜ್ಯದ ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿತ್ತು.
ರಾಜ್ಯದ ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿವೆ :
ದಕ್ಷಿಣ ಕನ್ನಡ : ಪದ್ಮರಾಜ್
ಉಡುಪಿ – ಚಿಕ್ಕಮಗಳೂರು : ಜಯಪ್ರಕಾಶ್ ಹೆಗ್ಡೆ,
ಮೈಸೂರು – ಕೊಡಗು : ಎಂ.ಲಕ್ಷ್ಮಣ್
ಬೆಂಗಳೂರು ಉತ್ತರ : ಪ್ರೊ. ರಾಜೀವ್ ಗೌಡ, ಕೊಪ್ಪಳ : ರಾಜಶೇಖರ್ ಹಿಟ್ನಾಳ್, ಉತ್ತರ ಕನ್ನಡ : ಅಂಜಲಿ ನಿಂಬಾಳ್ಕರ್, ಬೆಂಗಳೂರು ಕೇಂದ್ರ :ಮನ್ಸೂರ್ ಖಾನ್, ಬೆಂಗಳೂರು ದಕ್ಷಿಣ : ಸೌಮ್ಯ ರೆಡ್ಡಿ, ಚಿತ್ರದುರ್ಗ : ಚಂದ್ರಪ್ಪ, ಬೆಳಗಾವಿ : ಮೃಣಾಳ್ ಹೆಬ್ಬಾಳ್ಕರ್
ಬಾಗಲಕೋಟೆ : ಸಂಯುಕ್ತಾ ಪಾಟೀಲ್, ಚಿಕ್ಕೋಡಿ : ಪ್ರಿಯಾಂಕಾ ಜಾರಕಿಹೊಳಿ,
ಹುಬ್ಬಳ್ಳಿ-ಧಾರವಾಡ : ವಿನೋದ್ ಅಸೂಟಿ, ದಾವಣಗೆರೆ : ಪ್ರಭಾ ಮಲ್ಲಿಕಾರ್ಜುನ್, ಕಲಬುರಗಿ : ರಾಧಾಕೃಷ್ಣ ದೊಡ್ಮನಿ, ಬೀದರ್ : ಸಾಗರ್ ಖಂಡ್ರೆ, ರಾಯಚೂರು : ಕುಮಾರ್ ನಾಯ್ಕ್ ,









