The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ನಗರ ಪಂಚಾಯತ್‌ ಸಭೆಯಲ್ಲಿ ನಡೆದಿರುವ ಘಟನೆ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ-ಕಾಂಗ್ರೆಸ್: ವಿಪಕ್ಷ ಸದಸ್ಯರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಖಂಡನೀಯ: ಪಿ.ಸಿ.ಜಯರಾಮ

by ದಿ ಸುಳ್ಯ ಮಿರರ್ ಸುದ್ದಿಜಾಲ November 3, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 3, 2022
Share this article

ಸುಳ್ಯ: ಸುಳ್ಯ ನಗರ ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ನಡೆದಿರುವ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಆಡಳಿತ ಪಕ್ಷದ ನಾಮ ನಿರ್ದೇಶಿತ ಸದಸ್ಯ ವಿಪಕ್ಷ ಸದಸ್ಯರ ಮೇಲೆರಗಿ ಬರುವುದು ಪ್ರತಿಭಟನೆಯನ್ಬು ಹತ್ತಿಕ್ಕುವ ಪ್ರಯತ್ನ ಇದು ಖಂಡನೀಯ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಗರ ಪಂಚಾಯತ್ ಆಡಳಿತವನ್ನು ಮುನ್ನಡೆಸಲು ಮತ್ತು ಸಭೆಯನ್ನು ನಿಯಂತ್ರಿಸಲು ನಗರ ಪಂಚಾಯತ್ ಅಧ್ಯಕ್ಷರು ಸಂಪೂರ್ಣ ವಿಫಲರಾಗಿದ್ದಾರೆ. ನ್ಯಾಯಯುತ ಬೇಡಿಕೆಯನ್ನು ಮುಂದಿರಿಸಿ ನಗರ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪಂಚಾಯತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾಗ ನಾಮ ನಿರ್ದೇಶಿತ ಸದಸ್ಯರು ಅವರ ಮೇಲೆರಗಿ ಬರುವುದನ್ನು ತಡೆಯಲು, ಅದನ್ನು ನಿಯಂತ್ರಿಸಲು ಅಧ್ಯಕ್ಷರು ವಿಫಲರಾಗಿದ್ದಾರೆ. ಅಧಿಕಾರಿಗಳು ಇಲ್ಲದೆ, ನಗರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗದೆ ಜನರು ಬೇಷತ್ತು ಹೋಗಿದ್ದಾರೆ. ಇದನ್ನು ಪ್ರಶ್ನಿಸುವುದು, ಆಗದೇ ಇದ್ದಾಗ ಪ್ರತಿಭಟಿಸುವುದು ವಿರೋಧ ಪಕ್ಷಗಳ ಕರ್ತವ್ಯ. ಚುನಾವಣೆಯಲ್ಲಿ ಗೆದ್ದ ಸದಸ್ಯರ ಕರ್ತವ್ಯಕ್ಕೆ ನಾಮನಿರ್ದೇಶಿತ ಸದಸ್ಯರು ಅಡ್ಡಿಪಡಿಸಲು ಮುಂದಾಗಿರುವುದು ಅಕ್ಷಮ್ಯ ಎಂದು ಹೇಳಿದರು. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಸ ವಿಲೇವಾರಿ ಸಮಸ್ಯೆ, ಬೀದಿ ದೀಪಗಳ ಸಮಸ್ಯೆಗಳು ಪರಿಹಾರ ಆಗುವುದಿಲ್ಲ. ನಗರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಅವರು ಹೇಳಿದರು.

ಟೆಂಡರ್ ವ್ಯವಸ್ಥೆಯಂತೆ ಕಸ ಸಾಗಾಟ ಆಗಿಲ್ಲ- ಗೋಕುಲ್‌ದಾಸ್:
ನಗರ ಪಂಚಾಯತ್ ಸುತ್ತ ಮುತ್ತ ಇರುವ ಎಲ್ಲಾ ಕಸವನ್ನು ಸಾಗಾಟ ಮಾಡಬೇಕು ಎಂದು ಟೆಂಡರ್ ಆಗಿದ್ದರೂ ಕೆಲವು ಲೋಡ್ ಕಸ ಮಾತ್ರ‌ ಸಾಗಾಟ ಮಾಡಿ 8.29 ಲಕ್ಷ ಪಾವತಿಯಾಗಿದೆ‌. ಆದರೆ ಟೆಂಡರ್ ವ್ಯವಸ್ಥೆಯ ಪ್ರಕಾರ ಕಸ ಸಾಗಾಟ ಆಗಿಲ್ಲ ಎಂದು ನಗರ ಪಂಚಾಯತ್ ಮಾಜಿ ಸದಸ್ಯ ಕೆ.ಗೋಕುಲ್‌ದಾಸ್ ಹೇಳಿದ್ದಾರೆ. ಹಸಿ ಕಸ ಎಲ್ಲಿಗೆ ಸಾಗಾಟ ಆಗುತಿದೆ ಎಂಬ ಬಗ್ಗೆ ನಗರ ಪಂಚಾಯತ್ ಸಾರ್ವಜನಿಕರಿಗೆ ಮಾಹಿತಿ ಪ್ರತಿ ತಿಂಗಳು ಹಸಿ ಕಸದ ಸಾಗಾಟಕ್ಕೆ 45 ಸಾವಿರ ರೂ ಪಾವತಿಸಲಾಗುತ್ತದೆ. ಹಸಿ ಕಸ ಸಾಗಾಟಕ್ಕೆ ಟೆಂಡರ್ ನಡೆಸಬೇಕು ಎಂದು ಗೋಕುಲ್‌ದಾಸ್ ಆಗ್ರಹಿಸಿದರು.

ಮಳೆ ಹಾನಿಗೆ ತಾತ್ಕಾಲಿಕ ತೇಪೆಯಿಂದ ಸಂಕಷ್ಟ-ಭರತ್ ಮುಂಡೋಡಿ
ಮಳೆಗಾಲದಲ್ಲಿ ಮಳೆ ಹಾನಿಯಿಂದ ಸುಳ್ಯ ತಾಲೂಕಿನಲ್ಲಿ ಅತೀ ಹೆಚ್ಚು ನಷ್ಟ ಆಗಿದೆ. ರಸ್ತೆ, ಸೇತುವೆ ಸೇರಿದಂತೆ ಭಾರೀ ದೊಡ್ಡ ನಷ್ಟ ಉಂಟಾಗಿದೆ. ಆದರೆ ಈಗ ಹಾನಿಯಾಗಿರುವ ಕಡೆಗಳಲ್ಲಿ ತಾತ್ಕಾಲಿಕವಾಗಿ ದುರಸ್ಥಿ ಪಡಿಸುವ ಕೆಲಸವಷ್ಟೇ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಭರತ್‌ ಮುಂಡೋಡಿ ಹೇಳಿದರು. ತಾತ್ಕಾಲಿಕ ತೇಪೆ ಮುಂದಿನ ಮಳೆಗಾಲದ ವೇಳೆಗೆ ನಾಶವಾಗಿ ಜನರಿಗೆ ಮತ್ತೆ ಸಂಕಷ್ಟ ಎದುರಾಗುವ ಸಂಭವ ಇದೆ. ಕ್ಷೇತ್ರದ ಮಳೆ ಹಾನಿಯ ಸಮಸ್ಯೆಯನ್ನು ಮುಖ್ಯಮಂತ್ರಿಯ ಗಮನಕ್ಕೆ ತಂದು 500 ಕೋಟಿ ವಿಶೇಷ ಪ್ಯಾಕೇಜ್ ತರುವ ಕೆಲಸವನ್ನು ಸಚಿವ ಅಂಗಾರ‌ ಮಾಡಬೇಕಿತ್ತು. ಆದರೆ ಆ ರೀತಿಯ ಯಾವುದೇ ಪ್ರಯತ್ನ ನಡೆಸದೇ ಇದ್ದದು ದುರದೃಷ್ಟಕರ ಎಂದು ಅವರು ಹೇಳಿದರು.ಮಾವಿನಕಟ್ಟೆ-ಕೊಲ್ಲಮೊಗ್ರ ರಸ್ತೆ 1988ರಲ್ಲಿ ನಾನು ಜಿಲ್ಲಾಪರಿಷತ್ ಸದಸ್ಯನಾಗಿದ್ದ ಸಂದರ್ಭದಲ್ಲಿ ಡಾಮರೀಕರಣ ಮಾಡಿಸಿದ್ದೆ ಆ ಬಳಿಕ 34 ವರ್ಷ ರಸ್ತೆಗೆ ಯಾವುದೇ ಅನುದಾನ ಇರಿಸಿಲ್ಲ. ಈ ವರ್ಷ 30 ಲಕ್ಷ ಲಅನುದಾನ ಇರಿಸಿದ್ದಾರೆ. ಕಳೆದ 28 ವರ್ಷಗಳಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಯನ್ನು ಶಾಸಕರು ಕಡೆಗಣಿಸಿದ್ದಾರೆ ಎಂದು ಭರತ್ ಮುಂಡೋಡಿ ಆರೋಪಿಸಿದರು

ಸುದ್ದಿಗೋಷ್ಠಿಯಲ್ಲಿ ‌ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ, ಅಬ್ದುಲ್ ಗಫೂರ್ ಕಲ್ಮಡ್ಕ, ಸುರೇಶ್ ಎಂ.ಎಚ್, ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವರಕ್ಷ-ತರಬೇತಿಕಾರ್ಯಕ್ರಮ
next post
ಗಮನ ಸೆಳೆದಿದೆ ಅಪೂರ್ವ ಗೋಕುಲ್‌ದಾಸ್ ರಚಿಸಿದ ಕಾಂತಾರ ಸಿನಿಮಾದ ಪಂಜುರ್ಲಿ ದೈವದ ಚಿತ್ರ !

You may also like

ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ

June 8, 2023

ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

June 8, 2023

ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್...

June 8, 2023

ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ...

June 8, 2023

ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ...

June 8, 2023

ಚೂಂತಾರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ.

June 7, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಮಂಗಳೂರಿನಲ್ಲಿ ಮಳೆ
  • ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ‘ನಮ್ಮ ನಡಿಗೆ ಸ್ವಚ್ಛತೆಯೆಡೆಗೆ’ ಜಾಗೃತಿ ಆಂದೋಲನ
  • ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ
  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ