ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ಹಾಗು ಗೌರವ ಸಲಹೆಗಾರರ ಸಭೆ ಸುಳ್ಯ ಪರಿವಾರಕಾನ ಗ್ರಾಂಡ್ ಪರಿವಾರ್ ಉಡುಪಿ ಗಾರ್ಡನ್ ಸಭಾಂಗಣದಲ್ಲಿ ಜರಗಿತು.
ಅಧ್ಯಕ್ಷತೆ ಯನ್ನು ಸುಳ್ಯ ಬ್ಲಾಕ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ವಹಿಸಿದ್ದರು. ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಕಾರ್ಯದರ್ಶಿ ಕೆ. ಎಂ. ಮುಸ್ತಾಫ ದಿಕ್ಸೂಚಿ ಭಾಷಣ ಮಾಡಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮ, ಪುತ್ತೂರು ಬ್ಲಾಕ್ ಕಾಂಗ್ರೆಸ್
ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಶುಕೂರ್ ಹಾಜಿ
ಮುಖ್ಯಅತಿಥಿಗಳಾಗಿ ಕೆಪಿಸಿಸಿ ಸಂಯೋಜಕ ಎಚ್. ಎಂ. ನಂದಕುಮಾರ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ. ಎಸ್. ಗಂಗಾಧರ,ಎನ್ಎಸ್ಯುಐ ಅಧ್ಯಕ್ಷ ಕೀರ್ತನ್ ಕೊಡೆಪಾಲ ಮೊದಲಾದವರು ಭಾಗವಹಿಸಿದ್ದರು.
ವೇದಿಕೆಯಲ್ಲಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್, ಕೆಪೆಕ್ ಮಾಜಿ ನಿರ್ದೇಶಕ ಪಿ. ಎ ಮಹಮ್ಮದ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಫೂರ್ ಕಲ್ಮಡ್ಕ, ಗೌರವ ಸಲಹೆಗಾರರಾದ ಹಾಜಿ ಇಸಾಕ್ ಸಾಹೇಬ್ ಪಾಜಪ್ಪಳ್ಳ, ಬಾಪು ಸಾಹೇಬ್, ಮಹಮ್ಮದ್ ಕುಂಞಿ ಗೂನಡ್ಕ, ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ,ಯುವ ಕಾಂಗ್ರೆಸ್ ಅಧ್ಯಕ್ಷ ಹಮೀದ್ ಕುತ್ತಾಮೊಟ್ಟೆ, ಜಿಲ್ಲಾ ಅಲ್ಪಸಂಖ್ಯಾತರ ಘಟಕ ಪದಾಧಿಕಾರಿಗಳಾದ ಎಚ್. ಎ. ಉಮ್ಮರ್, ಬಶೀರ್ ನೆಲ್ಯಮಜಲು, ಎ. ಕೆ ಇಬ್ರಾಹಿಂ, ಡಿಸಿಸಿ ಮಾಜಿ ಕಾರ್ಯದರ್ಶಿ ಮಜೀದ್ ಅಡ್ಕಾರ್, ಜಾಲ್ಸೂರು ಗ್ರಾಮ ಪಂಚಾಯತ್ ಸದಸ್ಯ ಮುಜೀಬ್, ಡಾ. ಆರ್. ಬಿ. ಬಶೀರ್,ವಕೀಲರಾದ ಅಬೂಬಕ್ಕರ್ ಅಡ್ಕಾರ್, ಮೂಸಾ ಪೈoಬೆಚಾಲು, ಮೊದಲಾದವರು ಉಪಸ್ಥಿತರಿದ್ದರು, ನಗರ ಪಂಚಾಯತ್ ಸದಸ್ಯ, ತಾಲೂಕು ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಧೀರಕ್ರಾಸ್ತ ಬೀರಮಂಗಲ ವಂದಿಸಿದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳಿಗೆ ತಮ್ಮ ನೇಮಕಾತಿಯ ಆದೇಶ ಪತ್ರಗಳನ್ನು ಹಸ್ತಾಂತರ ಮಾಡಲಾಯಿತು.