The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಕಾಂಗ್ರೆಸ್‌ನದ್ದು ಜನಪರ, ಅಭಿವೃದ್ಧಿ ಪರ ಪ್ರಣಾಳಿಕೆ-ಭರತ್ ಮುಂಡೋಡಿ: ಸುಳ್ಯ ರೈತ ಸ್ವಾತಂತ್ರ್ಯ ಹೋರಾಟದ ನೆನಪಿನ ಭವನ, ಅಡಿಕೆ ಎಲೆ ಹಳದಿ ರೋಗಕ್ಕೆ ಪರಿಹಾರ ಗ್ಯಾರಂಟಿ

by ದಿ ಸುಳ್ಯ ಮಿರರ್ ಸುದ್ದಿಜಾಲ May 4, 2023
by ದಿ ಸುಳ್ಯ ಮಿರರ್ ಸುದ್ದಿಜಾಲ May 4, 2023
Share this article

ಸುಳ್ಯ: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಜನಪರ ಹಾಗು ಅಭಿವೃದ್ಧಿ ಪರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಸುಳ್ಯಕ್ಕೂ ಹಲವು ಕೊಡುಗೆಗಳನ್ನು ಘೋಷಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅದನ್ನು ಅನುಷ್ಠಾನಗೊಳ್ಳಲಿದೆ ಎಂದು ಕಾಂಯ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಗಳನ್ನು ಜನರ ಮುಂದೆ ಈಗಾಗಲೇ ಇರಿಸಿದ್ದು ಅದನ್ನು ಜನರು

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಒಪ್ಪಿಕೊಂಡಿದ್ದಾರೆ. ಇದೀಗ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು ಅದು ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ ಎಂದರು. ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮವನ್ನು ಸುಳ್ಯದಿಂದ ಆರಂಭಿಸಿದ ಕೆದಂಬಾಡಿ ರಾಮಯ್ಯ ಗೌಡರ ನೆನಪು ಹಾಗೂ ಸುಳ್ಯ ರೈತ ಸ್ವಾತಂತ್ರ್ಯ ಹೋರಾಟದ ಸ್ಮಾರಕವಾಗಿ ಸುಳ್ಯದಲ್ಲಿ ಭವನ ನಿರ್ಮಾಣಕ್ಕೆ ಮತ್ತು ಸ್ಥಳ ಗುರುತಿಸುವಿಕೆಗೆ 1 ಕೋಟಿ ರೂ‌ ಮೀಸಲಿಡಲಾಗಿದೆ. ಈ ಭಾಗದಲ್ಲಿರುವ ಅಡಿಕೆ ಎಲೆ ಹಳದಿ ರೋಗದ ಪರಿಹಾರಕ್ಕೆ ಶಾಶ್ವತ ಕ್ರಮ ಕೈಗೊಳ್ಳಲಾಗುತ್ತದೆ.ಬಡ್ಡಿ ರಹಿತ ಸಾಲ 3 ಲಕ್ಷದಿಂದ 10 ಲಕ್ಷಕ್ಕೆ ಏರಿಸಿದ್ದಲ್ಲದೆ,10 ಲಕ್ಷದಿಂದ 15 ಲಕ್ಷದವರೆಗೆ ಶೇ.3 ದರದಲ್ಲಿ ಸಾಲ ಸೌಲಭ್ಯ‌ ನೀಡಲಾಗುವುದು.ಗ್ರಾಮೀಣ ಪ್ರದೇಶದಲ್ಲಿ 3 ಫೇಸ್ ವಿದ್ಯುತ್ ಹಗಲು ಹೊತ್ತಿನಲ್ಲಿ 8 ಗಂಟೆ ನೀಡಲಾಗುವುದು.ರಬ್ಬರ್ ಕೃಷಿಗಾಗಿ ರೂ.25 ಕೋಟಿಯ ಪ್ಯಾಕೇಜ್, ಕ್ಷೀರಧಾರೆ ಯೋಜನೆಯಡಿ

ಪ್ರತೀ ಲೀಟರ್ ಹಾಲಿನ ಸಬ್ಸಿಡಿಯನ್ನು ರೂ.5 ರಿಂದ 7 ಕ್ಕೆ ಏರಿಕೆ. ಮಹಿಳೆಯರಿಗೆ ಯಾವುದೇ ಭದ್ರತೆ ಇಲ್ಲದೆ ಎರಡು ಹಸು ಅಥವಾ ಎಮ್ಮೆಗಳನ್ನು ಖರೀದಿಸಲು ‌ಬಡ್ಡಿ‌ ರಹಿತ ಸಾಲ. ಮೀನುಗಾರಿಕೆಗೆ ಪ್ರೋತ್ಸಾಹ, ಮೀನುಗಾರಿಕೆ ಮಹಿಳೆಗೆ 3 ಲಕ್ಷ ಬಡ್ಡಿ ರಹಿತ ಸಾಲ. ಆಳ ಸಮುದ್ರ ಮೀನುಗಾರಿಕೆಗೆ 500 ಲೀಟರ್ ಡೀಸೆಲ್ ತೆರಿಗೆ ಮುಕ್ತ, ಮೀನುಗಾರಿಕೆ ನಿಷೇಧ ಸಮಯದಲ್ಲಿ ಎಲ್ಲ ಮೀನುಗಾರರಿಗೆ ತಿಂಗಳಿಗೆ 6 ಸಾವಿರ ರೂ. ಒದಗಿಸಲು ಕ್ರಮ. ಮೀನುಗಾರಿಕೆ ಕ್ಷೇತ್ರದಲ್ಲಿ ಕನಿಷ್ಟ 10 ಲಕ್ಷ ಉದ್ಯೋಗ ಸೃಷ್ಟಿ. ರೈತರಿಗೆ ತಮ್ಮ ಜಮೀನಿನಲ್ಲಿ ಕೈಗಾರಿಕೆ ಸ್ಥಾಪಿಸಲು ಇರುವ ತೊಡರುಗಳ ನಿವಾರಣೆ. ಸ್ಮಾರ್ಟ್‌ ಆಫ್ ನಿಧಿ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ರೂ.10 ಕೋಟಿ ನೀಡಿಕೆ. ಶಿಕ್ಷಣ ಕ್ಷೇತ್ರದಲ್ಲಿ ಇರುವ ಖಾಲಿ‌ಹುದ್ದೆಗಳನ್ನು ಒಂದು ವರ್ಷದಲ್ಲಿ‌ ಭರ್ತಿ ಮಾಡಲು ಕ್ರಮ. ಬಡವರ ವಸತಿ ಯೋಜನೆಗಳಿಗೆ ಸಬ್ಸಿಡಿ ರೂ.3 ಲಕ್ಷಕ್ಕೆ ಹೆಚ್ಚಳ‌ ಹೀಗೆ ಜನಪರವಾದ ಹಲವು ಯೋಜನೆಗಳನ್ನು ತರಲಾಗಿದೆ ‌ಎಂದು ಅವರು‌ ವಿವರ ನೀಡಿದರು

ಬ್ಲಾಕ್ ‌ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಮಾತನಾಡಿ ಬಿಜೆಪಿ ಸರಕಾರದ ಭ್ರಷ್ಟಾಚಾರ, ಬೆಲೆ ಏರಿಕೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಈ‌ಬಾರಿ ಬದಲಾವಣೆ ಬಯಸಿದ್ದಾರೆ. ಸುಳ್ಯ ‌ಕ್ಷೇತ್ರದಲ್ಲಿ ಕಾಂಗ್ರೆಸ್ ‌ಪರ ಒಲವು ಹೆಚ್ಚಾಗಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲುವುದು ಗ್ಯಾರಂಟಿ. ಈಗಾಗಲೇ ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಗಳನ್ನು ಜನರು ಒಪ್ಪಿಕೊಂಡಿದ್ದಾರೆ. ನಮ್ಮ ಸರಕಾರ ಅಧಿಕಾರಕ್ಕೆ ‌ಬಂದ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಈ ಗ್ಯಾರಂಟಿ ನಿರ್ಣಯ‌ಕೈಗೊಳ್ಳಲಾಗುತ್ತದೆ ಎಂದು‌ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಪ್ರಚಾರ ಸಮಿತಿ‌ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್ ಇದ್ದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರಿಂದ ಗ್ರಾಮ ಭೇಟಿ: ಚುನಾವಣಾ ಪ್ರಚಾರ-ರೋಡ್ ಶೋ
next post
ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಸುಳ್ಯದಲ್ಲಿ ರೋಡ್ ಶೋ

You may also like

ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

June 8, 2023

ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್...

June 8, 2023

ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ...

June 8, 2023

ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ...

June 8, 2023

ಚೂಂತಾರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ.

June 7, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

ಡೆಂಗ್ಯೂ, ಮಲೇರಿಯಾ ಬಗ್ಗೆ ಮುನ್ನೆಚ್ಚರಿಕೆ ಇರಲಿ: ಡಾ. ಕುಮಾರ್

June 6, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ
  • ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್ ಆಗಮನ: ಕೇರಳದಲ್ಲಿ 4 ದಿನ ಮಳೆಯ ಮುನ್ಸೂಚನೆ
  • ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ ಸೂಚನೆ: ಆಗಸ್ಟ್‌ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ
  • ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ