ಸುಳ್ಯ:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಗೂನಡ್ಕದಲ್ಲಿ ಕಂಟೈನರ್ ಲಾರಿ ಮತ್ತು ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಾಸರಗೋಡು ಮೂಲದ ಮಹಮ್ಮದ್ ಝಮೀರ್ ಗಾಯಗೊಂಡವರು ಎಂದು ತಿಳಿದುಬಂದಿದೆ. ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ಕೂಟಿ ಹಾಗೂ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿದೆ.ಗಂಭೀರ ಗಾಯಗೊಂಡ ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟಿ ತೀವ್ರ ಜಖಂಗೊಂಡಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.