ಬೆಂಗಳೂರು:ರಾಜ್ಯದಲ್ಲಿ ಹಬ್ಬ, ಮದುವೆ, ರಾಜಕೀಯ ಸಮಾರಂಭಗಳಲ್ಲಿ ಪಟಾಕಿ ನಿಷೇಧಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅತ್ತಿಬೆಲೆ ದುರಂತದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ
ಇದೆ. ಉಳಿದ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ ಎಂದರು.
ಗಣೇಶ ಹಬ್ಬ, ಮದುವೆ ಮತ್ತು ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸುವಂತಿಲ್ಲ.ಪ್ರತಿಯೊಬ್ಬರೂ ದೀಪಾವಳಿ ಸಮಯಯಲ್ಲಿ ಮಾತ್ರ ಹಸಿರು ಪಟಾಕಿ ಬಳಸಬಹುದು ಎಂದು ತಿಳಿಸಿದರು. ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಹಸಿರು ಪಟಾಕಿ ನಿಯಮಾವಳಿಗಳಿಗೆ ವಿರುದ್ಧವಾಗಿ ಅಂಗಡಿಗಳಿದ್ದರೆ ಅದರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದರು.ರಾಜ್ಯದಲ್ಲಿ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ. ಉಳಿದ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ. ಹಾಗೆಯೇ ದೀಪಾವಳಿಗೆ ಹಸಿರು ಪಟಾಕಿ ಮಾತ್ರ ಬಳಸಲು ಅವಕಾಶವಿರುತ್ತದೆ ಎಂದು ಸ್ಪಷ್ಟಪಡಿಸಿದರು. ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಹಾಗೂ ಇತರ ಅಧಿಕಾರಿಗಳು ಇದ್ದರು.