ಸುಳ್ಯ:ಕರ್ನಾಟಕ ವಿಧಾನ ಸಭೆ ಚುನಾವಣೆಯ ಹಿನ್ನಲೆಯಲ್ಲಿ ಜನರಲ್ಲಿ ಆತ್ಮ ವಿಶ್ವಾಸ ಮೂಡಿಸುವ ಹಿನ್ನಲೆಯಲ್ಲಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಕೇಂದ್ರ ಅರೆ ಸೇನಾಪಡೆ ಹಾಗೂ ಸ್ಥಳೀಯ ಪೊಲೀಸರಿಂದ ಪಥ ಸಂಚಲನ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ
2 ಗ್ರಾಮ ಗಳಲ್ಲಿ,ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ 6 ಸೂಕ್ಷ್ಮ ಸ್ಥಳ ಗಳಲ್ಲಿ ಪುತ್ತುರು ಠಾಣಾ ವ್ಯಾಪ್ತಿಯ 3 ಪ್ರಮುಖ ಸ್ಥಳಗಳಲ್ಲಿ ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಕೇರಳ ಗಡಿ ಸೂಕ್ಷ್ಮ ಸ್ಥಳಗಳಲ್ಲಿ,
ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕೇರಳ ಗಡಿಯ ಸೂಕ್ಷ್ಮ ಪ್ರದೇಶಗಳಲ್ಲಿ
ಧರ್ಮಸ್ಥಳ ಠಾಣೆ ವ್ಯಾಪ್ತಿಯ 4 ಸೂಕ್ಷ್ಮ ಪ್ರದೇಶಗಳಲ್ಲಿ
ಕೇಂದ್ರ ಅರೆಸೇನಾಪಡೆ
ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲಾಯಿತು ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ