ಭುವನೇಶ್ವರ: ಉತ್ತರ ಅಂಡಮಾನ್ನ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪಶ್ಚಿಮ ಬಂಗಾಳದ ಸಾಗರ ದ್ವೀಪದ ಆಗ್ನೇಯ ದಿಕ್ಕಿನ ಸಮುದ್ರದಲ್ಲಿ ಇದೇ 24ರಂದು ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ವಾಯವ್ಯ ಬಂಗಾಳ ಕೊಲ್ಲಿಯ ಕಡೆಗೆ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಒಡಿಶಾ ಹಾಗೂ ಕರಾವಳಿ ಪ್ರದೇಶ ಇರುವ ಕೆಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹೇಳಿದೆ.ಒಡಿಶಾ ಕರಾವಳಿ ಮತ್ತು ಬಂಗಾಳಕೊಲ್ಲಿಯಲ್ಲಿ ಮೀನುಗಾರರು ಆಳಸಮುದ್ರಕ್ಕೆ ತೆರಳದಂತೆ ಐಎಂಡಿ ಎಚ್ಚರಿಕೆ ನೀಡಿದೆ.ಒಡಿಶಾದ ಪುರಿ, ಬಾಲೇಶ್ವರ, ಕಟಕ್, ಖುರ್ದಾ ಮೊದಲಾದೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಸ್ಥಳೀಯ ಹವಾಮಾನ ಕೇಂದ್ರ ಹೇಳಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post