The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಧಾರ್ಮಿಕ ಉತ್ಸವಗಳ ಆಚರಣೆಯಿಂದ ಬದುಕಿನಲ್ಲಿ ನೆಮ್ಮದಿ: ಸಚಿವ ಅಂಗಾರ:ಸುಳ್ಯ ದಸರಾ ಸಾಂಸ್ಕೃತಿಕ ಉತ್ಸವ ಸಮಾರೋಪ

by ದಿ ಸುಳ್ಯ ಮಿರರ್ ಸುದ್ದಿಜಾಲ October 9, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 9, 2022
Share this article

ಸುಳ್ಯ: ಶ್ರೀ ದೇವಿಯ ಆರಾಧನೆ ಮತ್ತು ನಮ್ನ ಧಾರ್ಮಿಕ ಉತ್ಸವಗಳ ಆಚರಣೆಯಿಂದ ಬದುಕಿನಲ್ಲಿ ನೆಮ್ಮದಿ ಮತ್ತು ಉನ್ನತಿ ದೊರೆಯಲು ಸಾಧ್ಯ ಎಂದು ಬಂದರು ಮೀನುಗಾರಿಕೆ ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯದ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ಸುಳ್ಯ ತಾಲೂಕು ದಸರ ಉತ್ಸವ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

51ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ – ಸುಳ್ಯ ದಸರಾದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೊಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ಶ್ರಮದ ಮೂಲಕ ಆರ್ಥಿಕ ಸದೃಢತೆಯನ್ನು ಪಡೆದುಕೊಳ್ಳಬೇಕು ಎಂದ ಅವರು ನಮ್ಮ ಕಲೆ, ಸಂಸ್ಕೃತಿಗಳ ಮೂಲಕ ಜೀವನದಲ್ಲಿ ಸಂತೋಷವನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ‘ಸಹಕಾರಿ ರತ್ನ’ ಪ್ರಶಸ್ತಿ ಪುರಸ್ಕೃತರಾದ ಕೆ.ಸೀತಾರಾಮ ರೈ ಸವಣೂರು, ಯುವ ಉದ್ಯಮಿ ಜಿತೇಂದ್ರ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸಾರ್ವಜನಿಕ ಶ್ರೀ ಶಾರದಾಂಬಾ ಉತ್ಸವ ಸಮಿತಿಯ ಲಾಂಛನವನ್ನು ಸಚಿವ ಅಂಗಾರ ಬಿಡುಗಡೆ ಮಾಡಿದರು.

ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವ ಸಲಹೆಗಾರರಾದ ಡಾ.ಲೀಲಾಧರ್ ಡಿ.ವಿ. ಮಾತನಾಡಿದರು. ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್‌ದಾಸ್,
ಅಧ್ಯಕ್ಷ ಚಿದಾನಂದ ವಿದ್ಯಾನಗರ, ಶಾರದಾಂಬಾ ದಸರಾ ಸೇವಾ ಟ್ರಸ್ಟ್‌ನ ಅಧ್ಯಕ್ಷ ನವೀನ್‌ಚಂದ್ರ ಕೆ.ಎಸ್, ಉಪಾಧ್ಯಕ್ಷ ನಾರಾಯಣ ಕೇಕಡ್ಕ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು, ಕೋಶಾಧಿಕಾರಿ ಪ್ರದೀಪ್ ಕೆ.ಎನ್. ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ಬೂಡು ರಾಧಾಕೃಷ್ಣ ರೈ, ಹರೀಶ್ ರೈ ಉಬರಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುರೋಹಿತ ನಾಗರಾಜ ಭಟ್ ಪ್ರಾರ್ಥಿಸಿದರು. ಶಾರದಾಂಬಾ ದಸರಾ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ನಾರಾಯಣ ಕೇಕಡ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್‌ದಾಸ್ ವರದಿ ವಾಚಿಸಿ, ಲಾಂಛನದ ಬಗ್ಗೆ ವಿವರ ನೀಡಿದರು. ಸಮಿತಿಯ ಅಧ್ಯಕ್ಷ ಚಿದಾನಂದ ವಿದ್ಯಾನಗರ ವಂದಿಸಿದರು. ಪತ್ರಕರ್ತ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಸುಳ್ಯ ಗಾಂಧಿನಗರ ಮಸ್ಜಿದ್ ಗ್ರಾಂಡ್ ಮೀಲಾದ್ ಸಮ್ಮೇಳನಕ್ಕೆ ಚಾಲನೆ
next post
ಸುಳ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

You may also like

ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ:...

June 4, 2023

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ: ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ...

June 4, 2023

ಅರೆಭಾಷೆ ರಸಾಯನ: ಐತಾರದ ಪೊಳ್ಮೆ.. ಪೂರಾ ಹೆಳ್ಮಕ್ಕಳಿಗೆ ಕೊಟ್ಟರೆ ಗಳ್ಮಕ್ಕಳಿಗೆ...

June 4, 2023

ಸರಕಾರದ ಗ್ಯಾರಂಟಿ ಯೋಜನೆ: ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಮಾರ್ಗಸೂಚಿ...

June 3, 2023

5 ಗ್ಯಾರಂಟಿ ಯೋಜನೆಗಳಂತಹಾ ಜನಪರ ಕಾರ್ಯಕ್ರಮ ನೀಡಲು ಕಾಂಗ್ರೆಸ್‌ನಿಂದ ಮಾತ್ರ...

June 3, 2023

ಬಾಲಸೋರ್ ರೈಲು ಅಪಘಾತ: ಮೃತರ ಸಂಖ್ಯೆ 233 ಕ್ಕೆ, 900...

June 3, 2023

ಒಡಿಶಾ ರೈಲು ದುರಂತ: ಮೃತರ ಕುಟುಂಬಕ್ಕೆ 10 ಲಕ್ಷ ರೂ.,...

June 2, 2023

ಒಡಿಶಾದ ಬಾಲಸೋರ್​​ನಲ್ಲಿ ರೈಲು ಅಪಘಾತ: 50 ಮಂದಿ ಸಾವು: 300...

June 2, 2023

ರಾಜ್ಯ ಸರಕಾರದ ಐದು ಗ್ಯಾರಂಟಿಗಳ ಅನುಷ್ಠಾನ ಹೇಗೆ.? ಷರತ್ತುಗಳು ಏನು..?...

June 2, 2023

ಐದೂ ಗ್ಯಾರಂಟಿಗಳ ಜಾರಿಗೆ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ ಘೋಷಣೆ

June 2, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ ಸಂಭ್ರಮ
  • ಕೇರಳದ ನರ್ಸ್‌ಗೆ ಒಲಿದ 45 ಕೋಟಿಯ ಅಬುಧಾಬಿ ಬಿಗ್ ಟಿಕೆಟ್ ಲಾಟರಿ ಅದೃಷ್ಟ
  • ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ: ಲೋಕ‌ ಕಲ್ಯಾಣಾರ್ಥವಾಗಿ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ
  • ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ ಮೆರವಣಿಗೆ
  • ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ