ಮಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮೇ 8 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.ಮೇ 8 ಬೆಳಿಗ್ಗೆ 8:15ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 9:55- ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಖನಿಜ ನಿಧಿ ಬಳಕೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ, 11ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ
ಮಳೆಗಾಲ ಪೂರ್ವ ಸಿದ್ಧತೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ, 12ಕ್ಕೆ ಮಂಗಳೂರು ಮಹಾನಗರ ಪಾಲಿಕೆ ಮತ್ತು ನಗರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚೆ, ಮಧ್ಯಾಹ್ನ 2:30ಕ್ಕೆ ಸುಲ್ತಾನ್ ಬತ್ತೇರಿಯಲ್ಲಿರುವ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ, 4ಕ್ಕೆಉಪ್ಪಿನಂಗಡಿ ಬಜತ್ತೂರು ಗ್ರಾಮದ ಭಗವಾನ್ 1008 ಶ್ರೀ ಪಾಶ್ರ್ವನಾಥ ಸ್ವಾಮಿ ತೀಥರ್ಂಕರರ ಧಾಮ ಸಂಪ್ರೋಕ್ಷಣಾಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾಮಹೋತ್ಸವ ಕಾರ್ಯಕ್ರಮ, ಸಂಜೆ 6ಕ್ಕೆ ಮೂಡಬಿದ್ರೆ ಶ್ರೀರಾಮ ಮಂದಿರ ಸಪರಿವಾರ ಶ್ರೀರಾಮ ದೇವರ ಬಿಂಬ ಪುನರ್ ಪ್ರತಿಷ್ಠಾ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ, ರಾತ್ರಿ 8:10 ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.














