ಜಾಲ್ಸೂರು: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ಮಾನಸಿಕ-ದೈಹಿಕ ವಿಕಸನ ಸಾಧ್ಯ ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ಜಂಪ್ರೋಪ್ ಪಂದ್ಯಾಟವನ್ನು ಉಧ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿದ್ದ
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿ ಸುಳ್ಯದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುಚಟಿಕೆಗಳು ಹೆಚ್ಚು ನಡೆಯುವುದರಿಂದ ಇಲ್ಲಿ ಸಾಮರಸ್ಯ ನೆಲೆ ನಿಂತಿದೆ ಎಂದರು.
ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ವಹಿಸಿದ್ದರು.
ವೇದಿಕೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಪ್ರೇಮನಾಥ ಶೆಟ್ಟಿ, ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಜಯರಾಮ ರೈ, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ನಿರ್ದೇಶಕ ಗಂಗಾಧರ ಕಾಳಮನೆ, ಜಾಲ್ಸೂರು ಗ್ರಾ.ಪಂ.ಸದಸ್ಯ ಬಾಬು ಕೆ.ಎಂ., ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ, ಸುಳ್ಯ ತಾಲೂಕು ಗ್ರೇಡ್-೧ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಪದ್ಮನಾಭ ಇದ್ದರು. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಭುವನೇಶ್, ಸುಳ್ಯ ತಾಲೂಕು ಪಿ.ಎಂ.ಪೋಷಣ್ ಅಭಿಯಾನ ನಿರ್ದೇಶಕರಾದ ವೀಣಾ ಎಂ.ಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ ಸ್ವಾಗತಿಸಿ, ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್ ವಂದಿಸಿದರು. ಸುಳ್ಯ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಮೇರ್ಕಜೆ ಕಾರ್ಯಕ್ರಮ ನಿರೂಪಿಸಿದರು.













