ಮಂಗಳೂರು:ಎಲ್ಕೆ-ಯುಕೆಜಿಯಿಂದ 12ನೇ ಕ್ಲಾಸ್ ತನಕ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶವಿರುವ ಎತಡು ಸಾವಿರ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದರು.ಪ್ರಾಥಮಿಕ ಶಿಕ್ಷಣದಲ್ಲಿ ಪರಿಣಾಮಕಾರಿ ಬದಲಾವಣೆಯ
ತರುವ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಿದೆ. ಮುಂದಿನ ವರ್ಷ 500 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸುವ ಯೋಜನೆ ಇದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೆ 3 ಶಾಲೆಗಳು ದೊರೆಯಲಿದೆ. ಸುಮಾರು 1,500 ಮಕ್ಕಳಿಗೆ ಸೇರ್ಪಡೆಗೆ ಅವಕಾಶವಿರುವ ಇಂತಹ ಶಾಲೆಗಳನ್ನು ಮೂರು ಗ್ರಾಮಗಳಿಗೆ ಒಂದರಂತೆ ಪ್ರಾರಂಭಿಸಲಾಗುವುದು. ಬಡವರ ಮಕ್ಕಳಿಗೆ ಈ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದು ಮಾಹಿತಿ ನೀಡಿದರು.ಖಾಲಿ ಇರುವ ಶಿಕ್ಷಕರ 53 ಸಾವಿರ ಹುದ್ದೆಗಳನ್ನು ಮುಂದೆ ಭರ್ತಿ ಮಾಡಲಾಗುವುದು. ಈಗ 43 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ.
ರಾಜ್ಯದಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುವುದು. ಎರಡು ವರ್ಷದಿಂದ ಎನ್ಇಪಿ ಜಾರಿ ಆಗಿದೆ. ಮುಂದೆ ಮಕ್ಕಳಿಗೆ ತೊಂದರೆ ಆಗದಂತೆ ಎಸ್ಇಪಿ ಜಾರಿಗೊಳಿಸಲಾಗುವುದು . ಸರ್ಕಾರಿ ಶಾಲೆಗಳಿಗೆ ಮಕ್ಕಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತದೆ ಎಂದರು.
ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಮೂರು ಪರೀಕ್ಷೆಗಳನ್ನು ನಡೆಸುವ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಇದರಿಂದಾಗಿ ಮಕ್ಕಳಿಗೆ ತುಂಬಾ ಅನುಕೂಲವಾಗಿದೆ. ಈ ವರ್ಷದಿಂದ ಸಪ್ಲಿಮೆಂಟರಿ ಅಂತ ಇಲ್ಲ. ಮೂರು ಬಾರಿ ಮಂಡಳಿ ಎಕ್ಸಾಂ. ಒಮ್ಮೆ ಫೈಲಾದವರು ಅದೇ ವರ್ಷ ಪರೀಕ್ಷೆ ಬರೆದು ಪಾಸಾಗಿ ಕಾಲೇಜಿಗೆ ಹೋಗಬಹುದು. ಮಕ್ಕಳ ಬೆಳವಣಿಗೆಗೆ ಇದು ಪೂರಕವಾಗಲಿದೆ. ಈಗಾಗಲೇ ಪಿಯುಸಿಯಲ್ಲಿ ಎರಡನೇ ಬಾರಿ ಪರೀಕ್ಷೆ ಬರೆದ 1.20 ಲಕ್ಷ ವಿದ್ಯಾರ್ಥಿಗಳ ಪೈಕಿ 42 ಸಾವಿರ ಮಕ್ಕಳು ಪಾಸಾಗಿ ಕಾಲೇಜು ಸೇರಿದ್ದಾರೆ. ಅದೇ ರೀತಿ ಎಸೆಸೆಲ್ಸಿಗೂ ಮೂರು ಪರೀಕ್ಷೆಗಳನ್ನು ನಡೆಸಲಾಗುವುದು ಎಂದರು.
ನಾವು ಚುನಾವಣಾ ಪೂರ್ವದಲ್ಲಿ ಮತದಾರರಿಗೆ ನೀಡಿದ್ದ ಗ್ಯಾರೆಂಟಿ ಯೋಜನೆಗಳು ಜಾರಿ ಮಾಡಿ ಸರಕಾರ ಉತ್ತಮವಾಗಿ ಕಾರ್ಯನಿರ್ವಹಿಸುತಿದೆ.ಕಾಂಗ್ರೆಸ್ ಜನರಿಗೆ ಹಿಂದಿನಿಂದಲೂ ಒಳ್ಳೆಯ ಕಾರ್ಯಕ್ರಮ ಕೊಡುತ್ತಾ ಬಂದಿದೆ. ಕಾಂಗ್ರೆಸ್ ನೀಡಿರುವ ಜನಪರ ಯೋಜನೆಗಳನ್ನು ಜನರು ಎಂದೆಂದಿಗೂ ನೆನಪಿಸುತ್ತಾರೆ ಎಂದರು.
ಎಂದು ನುಡಿದರು.
ದಕ್ಷಿಣ ಕನ್ನಡದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ. ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿ ವರದಿ ನೀಡಲು ತಮಗೆ 15 ದಿನಗಳ ಕಾಲಾವಕಾಶ ನೀಡಿದ್ದಾರೆ. ದ.ಕ.ದಲ್ಲಿ ಕಾಂಗ್ರೆಸ್ನ ಗೆಲುವನ್ನು ಚಾಲೆಂಜ್ ಆಗಿ ತೆಗೆದುಕೊಳ್ಳುತ್ತೇವೆ. ಕಾಂಗ್ರೆಸ್ನ ಜನಪರ ಕೆಲಸಗಳು ಪಕ್ಷದ ಗೆಲುವಿಗೆ ನೆರವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು