ಸುಳ್ಯ:ದ.ಕ. ಹಾಗೂ ಕೊಡಗು ಗಡಿ ಪ್ರದೇಶ ಪೆರಾಜೆ ಭಾಗದಲ್ಲಿ ಬೀಡುಬಿಟ್ಟಿರುವ ಕಾಡನೆಯನ್ನು ಕಾಡಿಗೆ ಅಟ್ಟಲು ಸುಳ್ಯ ವಲಯ ಹಾಗೂ ಸಂಪಾಜೆ ವಲಯ ಅರಣ್ಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಇದಕ್ಕಾಗಿ ಮಡಿಕೇರಿಯ
ಎಲಿಫೆಂಟ್ ಟಾಸ್ಕ್ ಫೋರ್ಸ್ ಆಗಮಿಸಿದೆ. ಆನೆಯನ್ನು ಭಾಗಮಂಡಲ ಮೀಸಲು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ನಡೆಸಲಾಯಿತು. ಎಂಟು ಮಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್ ತಂಡ ಸೇರಿ ಸಂಪಾಜೆ ವಲಯದ ತಂಡ ಹಾಗೂ ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ನೇತೃತ್ವದ ತಂಡ ಜಂಟಿಯಾಗಿ ಯೋಜನೆ ರೂಪಿಸಿ ಕಾರ್ಯಾಚರಣೆ ನಡೆಸಿದರು. ಸ್ಥಳೀಯರು ಸಹಕಾರ ನೀಡಿದರು.





