ಸುಳ್ಯ:ಧೀಮಂತ ನಾಯಕರಾದ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಸರಳ ಜೀವನ ಸತ್ಯನಿಷ್ಠೆ ಪ್ರಾಮಾಣಿಕತೆ ಇವುಗಳನ್ನು ನಾವು ಮೈಗೂಡಿಸಿಕೊಳ್ಳುವುದರ ಮೂಲಕ ಸಮಾಜಕ್ಕೆ ಆದರ್ಶಪ್ರಾಯರಾಗಬೇಕು. ಎಂದು ಸ್ನೇಹ ಶಿಕ್ಷಣ ಸಂಸ್ಥೆಯ
ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಹೇಳಿದರು. ಅವರು ದಿನಾಂಕ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಮ್ಮ ಶಾಲಾ ಶಿಕ್ಷಕಿಯರಾದ ವನಿತಾ, ಲಿಕ್ಷಿತ ಇವರು ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಬಗ್ಗೆ ಮಾತನಾಡಿದರು. ಶಿಕ್ಷಕಿ ಚಂದ್ರಕಲಾ ಎ. ಬಿ ಸ್ವಾಗತಿಸಿ, ಶಿಕ್ಷಕಿ ಪವಿತ್ರ ವಂದಿಸಿದರು. ಶಿಕ್ಷಕಿ ಜಯಂತಿ ಇವರು ಕಾರ್ಯಕ್ರಮ ನಿರೂಪಿಸಿದರು.