ಹರಿಹರ ಪಲ್ಲತ್ತಡ್ಕ: ಗಾಂಧಿ ಜಯಂತಿ ಪ್ರಯುಕ್ತ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಹಾಗೂ ಸುಳ್ಯದ ಯುವಜನ ಸೇವಾ ಸಂಸ್ಥೆ ನೀಡುವ ಗಾಂಧಿ ಸ್ಮೃತಿ ಪ್ರಶಸ್ತಿಯನ್ನು ಖ್ಯಾತ ವೈದ್ಯ, ಹರಿಹರಪಲ್ಲತಡ್ಕದ ಡಾ.ಚಂದ್ರಶೇಖರ ಕಿರಿಭಾಗ ಅವರಿಗೆ ಪ್ರದಾನ ಮಾಡಲಾಯಿತು. ಹರಿಹರಪಲ್ಲತಡ್ಕದ ಹರಿಹರೇಶ್ವರ ದೇವಸ್ಥಾನದ ಕಲಾ ಮಂದಿರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವನ್ನು
ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಡಾ.ಚಂದ್ರಶೇಖರ ಕಿರಿಭಾಗ ಮತ್ತು ಹರ್ಷಮ್ಮ ಚಂದ್ರಶೇಖರ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಪಂಜ ಪದವಿ ಪೂರ್ವ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರಭಾಕರ ಕಿರಿಭಾಗ ಗಾಂಧಿ ಸ್ಮೃತಿ ಹಾಗೂ ಅಭಿನಂದನಾ ಭಾಷಣ ಮಾಡಿದರು.
ಹರಿಹರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು, ಹರಿಹರ ಪಲ್ಲತಡ್ಕ ಗ್ರಾ.ಪಂ ಅಧ್ಯಕ್ಷ ವಿಜಯಕುಮಾರ್ ಅಂಙಣ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪ್ರವೀಣ್ ಕುಮಾರ್ ಎ.ಎಂ, ಸಚಿನ್ ಕ್ರೀಡಾ ಸಂಘ ಹರಿಹರ ಪಲ್ಲತಡ್ಕದ ಅಧ್ಯಕ್ಷ ಪ್ರದೀಪ್ ಕಜ್ಜೋಡಿ, ಯುವಜನ ಸೇವಾ ಸಂಘದ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಯುವಜನ ಸೇವಾ ಸಂಸ್ಥೆಯ ಶೈಲೇಶ್ ಅಂಬೆಕಲ್ಲು, ಯುವಜನ ಸಂಯುಕ್ತ ಮಂಡಳಿ ಮಾಜಿ ಅಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ಕಾರ್ಯಕ್ರಮ ಉಸ್ತುವಾರಿ ದಿನೇಶ್ ಹಾಲೆಮಜಲು ಉಪಸ್ಥಿತರಿದ್ದರು.
ಆರಂಭದಲ್ಲಿ ಮೀರಾ ಭಜನ್ ಕಾರ್ಯಕ್ರಮ ಜರಗಿತು.
ರಾಜೇಶ್ವರಿ, ಈಶ್ವರಿ, ಅಂಬಿಕ ಪ್ರಾರ್ಥಿಸಿದರು. ದೀಪಕ್ ಕುತ್ತುಮೊಟ್ಟೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರವೀಣ್ ಕುಮಾರ್ ವಂದಿಸಿದರು. ಗುರುರಾಜ್ ಅಜ್ಜಾವರ ಕಾರ್ಯಕ್ರಮ ನಿರೂಪಿಸಿದರು.